AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!

ಬಿಜೆಪಿ ನಾಯಕ ಸುರೇಶ್ ಗೋಪಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಐಎಂ ಅಭ್ಯರ್ಥಿ ವಿಎಸ್ ಸುನೀಲ್‌ಕುಮಾರ್ ಅವರನ್ನು ಸುಮಾರು 75,000 ಮತಗಳ ಅಂತರದಿಂದ ಸೋಲಿಸುವ ಮೂಲಕ ತ್ರಿಶೂರ್‌ನಲ್ಲಿ ಗೆದ್ದಿದ್ದರು. ಇವರು ಕೇರಳ ಮೊಟ್ಟ ಮೊದಲ ಬಿಜೆಪಿ ಸಂಸದರಾಗಿದ್ದಾರೆ.

Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!
ಸುರೇಶ್ ಗೋಪಿ
ಸುಷ್ಮಾ ಚಕ್ರೆ
|

Updated on:Jun 15, 2024 | 4:24 PM

Share

ತ್ರಿಶೂರ್: ಕೇಂದ್ರ ಸಚಿವ ಮತ್ತು ಕೇರಳದ ಬಿಜೆಪಿಯ ಮೊದಲ ಸಂಸದ ಸುರೇಶ್ ಗೋಪಿ (Suresh Gopi) ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು (Indira Gandhi) ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಇದೇ ವೇಳೆ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು ‘ಧೈರ್ಯಶಾಲಿ ಆಡಳಿತಗಾರ’ ಎಂದು ನಟ ಹಾಗೂ ರಾಜಕಾರಣಿ ಸುರೇಶ್ ಗೋಪಿ ಬಣ್ಣಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುರೇಶ್ ಗೋಪಿ ಅವರು ಮಾಜಿ ಮುಖ್ಯಮಂತ್ರಿಗಳಾದ ಕರುಣಾಕರನ್ ಮತ್ತು ಇ.ಕೆ ನಾಯನಾರ್ ಅವರನ್ನು ತಮ್ಮ ‘ರಾಜಕೀಯ ಗುರುಗಳು’ ಎಂದು ಕರೆದಿದ್ದಾರೆ. ತಮ್ಮ ಕ್ಷೇತ್ರವಾದ ತ್ರಿಶೂರ್‌ನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ನಂತರ ಮಾತನಾಡಿದ ಬಿಜೆಪಿ ನಾಯಕ ಸುರೇಶ್ ಗೋಪಿ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: G7 Summit: ಜಿ7 ಭಾಗವಲ್ಲದಿದ್ದರೂ ಇಟಲಿಯ ಶೃಂಗಸಭೆಯಲ್ಲಿ ಕೇಂದ್ರಬಿಂದುವಾದ ಪ್ರಧಾನಿ ಮೋದಿ

ಇಲ್ಲಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ ಶ್ರೀ ಗೋಪಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಹೇಳಿಕೆಗೆ ಯಾವುದೇ ರಾಜಕೀಯ ಅರ್ಥವನ್ನು ಸೇರಿಸಬೇಡಿ ಎಂದು ಸುದ್ದಿಗಾರರನ್ನು ಒತ್ತಾಯಿಸಿದ ಅವರು ನಾನು ನನ್ನ ‘ಗುರು’ಗಳಿಗೆ ಗೌರವ ಸಲ್ಲಿಸಲು ಸ್ಮಾರಕಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಭಾರತ ಮಾತೆ, ಮಾರ್ಕ್ಸ್‌ವಾದಿ ಹಿರಿಯ ನಾಯಕರನ್ನು ತನ್ನ ರಾಜಕೀಯ ಗುರು ಎಂದು ಕರೆದಿರುವ ಸುರೇಶ್ ಗೋಪಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂದಿರಾ ಗಾಂಧಿ ಹೇಗೆ “ಭಾರತದ ಮಾತೆ”ಯೋ ಹಾಗೇ ಕರುಣಾಕರನ್ “ಕೇರಳ ರಾಜ್ಯದ ಕಾಂಗ್ರೆಸ್ ಪಕ್ಷದ ಪಿತಾಮಹ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಸುರೇಶ್ ಗೋಪಿ ಅವರು ಈ ಬಾರಿ ತ್ರಿಶೂರ್ ಲೋಕಸಭಾ ಕ್ಷೇತ್ರವನ್ನು ಗೆದ್ದು ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದಿದ್ದಾರೆ. ತ್ರಿಶೂರ್ ಲೋಕಸಭಾ ಚುನಾವಣೆಗೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐ ಪ್ರಮುಖ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Sat, 15 June 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?