AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!

ಬಿಜೆಪಿ ನಾಯಕ ಸುರೇಶ್ ಗೋಪಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಐಎಂ ಅಭ್ಯರ್ಥಿ ವಿಎಸ್ ಸುನೀಲ್‌ಕುಮಾರ್ ಅವರನ್ನು ಸುಮಾರು 75,000 ಮತಗಳ ಅಂತರದಿಂದ ಸೋಲಿಸುವ ಮೂಲಕ ತ್ರಿಶೂರ್‌ನಲ್ಲಿ ಗೆದ್ದಿದ್ದರು. ಇವರು ಕೇರಳ ಮೊಟ್ಟ ಮೊದಲ ಬಿಜೆಪಿ ಸಂಸದರಾಗಿದ್ದಾರೆ.

Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!
ಸುರೇಶ್ ಗೋಪಿ
ಸುಷ್ಮಾ ಚಕ್ರೆ
|

Updated on:Jun 15, 2024 | 4:24 PM

Share

ತ್ರಿಶೂರ್: ಕೇಂದ್ರ ಸಚಿವ ಮತ್ತು ಕೇರಳದ ಬಿಜೆಪಿಯ ಮೊದಲ ಸಂಸದ ಸುರೇಶ್ ಗೋಪಿ (Suresh Gopi) ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು (Indira Gandhi) ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಇದೇ ವೇಳೆ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು ‘ಧೈರ್ಯಶಾಲಿ ಆಡಳಿತಗಾರ’ ಎಂದು ನಟ ಹಾಗೂ ರಾಜಕಾರಣಿ ಸುರೇಶ್ ಗೋಪಿ ಬಣ್ಣಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುರೇಶ್ ಗೋಪಿ ಅವರು ಮಾಜಿ ಮುಖ್ಯಮಂತ್ರಿಗಳಾದ ಕರುಣಾಕರನ್ ಮತ್ತು ಇ.ಕೆ ನಾಯನಾರ್ ಅವರನ್ನು ತಮ್ಮ ‘ರಾಜಕೀಯ ಗುರುಗಳು’ ಎಂದು ಕರೆದಿದ್ದಾರೆ. ತಮ್ಮ ಕ್ಷೇತ್ರವಾದ ತ್ರಿಶೂರ್‌ನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ನಂತರ ಮಾತನಾಡಿದ ಬಿಜೆಪಿ ನಾಯಕ ಸುರೇಶ್ ಗೋಪಿ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: G7 Summit: ಜಿ7 ಭಾಗವಲ್ಲದಿದ್ದರೂ ಇಟಲಿಯ ಶೃಂಗಸಭೆಯಲ್ಲಿ ಕೇಂದ್ರಬಿಂದುವಾದ ಪ್ರಧಾನಿ ಮೋದಿ

ಇಲ್ಲಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ ಶ್ರೀ ಗೋಪಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಹೇಳಿಕೆಗೆ ಯಾವುದೇ ರಾಜಕೀಯ ಅರ್ಥವನ್ನು ಸೇರಿಸಬೇಡಿ ಎಂದು ಸುದ್ದಿಗಾರರನ್ನು ಒತ್ತಾಯಿಸಿದ ಅವರು ನಾನು ನನ್ನ ‘ಗುರು’ಗಳಿಗೆ ಗೌರವ ಸಲ್ಲಿಸಲು ಸ್ಮಾರಕಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಭಾರತ ಮಾತೆ, ಮಾರ್ಕ್ಸ್‌ವಾದಿ ಹಿರಿಯ ನಾಯಕರನ್ನು ತನ್ನ ರಾಜಕೀಯ ಗುರು ಎಂದು ಕರೆದಿರುವ ಸುರೇಶ್ ಗೋಪಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂದಿರಾ ಗಾಂಧಿ ಹೇಗೆ “ಭಾರತದ ಮಾತೆ”ಯೋ ಹಾಗೇ ಕರುಣಾಕರನ್ “ಕೇರಳ ರಾಜ್ಯದ ಕಾಂಗ್ರೆಸ್ ಪಕ್ಷದ ಪಿತಾಮಹ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಸುರೇಶ್ ಗೋಪಿ ಅವರು ಈ ಬಾರಿ ತ್ರಿಶೂರ್ ಲೋಕಸಭಾ ಕ್ಷೇತ್ರವನ್ನು ಗೆದ್ದು ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದಿದ್ದಾರೆ. ತ್ರಿಶೂರ್ ಲೋಕಸಭಾ ಚುನಾವಣೆಗೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐ ಪ್ರಮುಖ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Sat, 15 June 24

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ