ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ರಾಮ ಮಂದಿರ ಚಳವಳಿಯ ರೂವಾರಿ ಎಲ್​ಕೆ ಅಡ್ವಾಣಿ ಭಾಗವಹಿಲಿರುವುದು ಇದೀಗ ಅಧಿಕೃತಗೊಂಡಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ
ಎಲ್​​ಕೆ ಅಡ್ವಾಣಿ

Updated on: Jan 11, 2024 | 7:06 AM

ನವದೆಹಲಿ, ಜನವರಿ 11: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir in Ayodhya) ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​​ಕೆ ಅಡ್ವಾಣಿ (LK Advani) ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ಹೋರಾಟದ ರೂವಾರಿ ಆಗಿರುವ ಅಡ್ವಾಣಿ, ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ವಿಹೆಚ್​ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಅಡ್ವಾಣಿ ಮತ್ತು ಮತ್ತೊಬ್ಬರು ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಫೋಟೊಗಳು ಪ್ರಕಟಗೊಂಡಿದ್ದವು.

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.

ಏತನ್ಮಧ್ಯೆ, ಅದ್ದೂರಿ ಸಮಾರಂಭಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ರಾಮಮಂದಿರಕ್ಕೆ ಈಗಾಗಲೇ 1,100 ಕೆಜಿ ತೂಕದ ದೀಪ, ಎಂಟು ಲೋಹಗಳಿಂದ ಮಾಡಿದ 2,100 ಕೆಜಿ ತೂಕದ ಗಂಟೆ ಸೇರಿದಂತೆ ಭಾರತ ಮತ್ತು ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಕಳುಹಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಎಲ್​ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಭಾಗಿಯಾಗುತ್ತಾರಾ?

ಕಾರ್ಯಕ್ರಮದ ಮೊದಲು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳ ಸ್ವಯಂಸೇವಕರು ದೇಶಾದ್ಯಂತ ಜನರಿಗೆ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಮಂತ್ರಾಕ್ಷತೆ ಸಹಿತ ಆಹ್ವಾನ ನೀಡುತ್ತಿದ್ದಾರೆ. ಪ್ರಾಣ ಪ್ರತಿಷ್ಠೆಯ ದಿನ ಮನೆಯಲ್ಲಿ ಹಾಗೂ ನೆರೆಹೊರೆಯಲ್ಲಿರುವ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ.

ಅಡ್ವಾಣಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಅವರಿಗಾಗಿ ಅಯೋಧ್ಯೆಯಲ್ಲಿ ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರಕ್ಕಾಗಿ ರಥಯಾತ್ರೆ ಮಾಡಿದ್ದ ಲಾಲ್ ಕೃಷ್ಣ ಅಡ್ವಾಣಿ ಅಯೋಧ್ಯೆ ಹೋರಾಟದ ಪ್ರಮುಖ ರೂವಾರಿಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Thu, 11 January 24

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us