AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 19, 2021 | 1:24 PM

Share

ಲಖನೌ: ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ (Uttar Pradesh Assembly Election 2022) ನಡೆಯಲಿದ್ದು,  ಅದರ ಬೆನ್ನಲ್ಲೇ ಬಿಜೆಪಿ ಇಂದಿನಿಂದ (ಡಿ.19) ರಾಜ್ಯದ ಒಟ್ಟು  ಆರು ಪ್ರದೇಶಗಳಲ್ಲಿ ಜನ ವಿಶ್ವಾಸ ಯಾತ್ರೆ(Jan Vishwas Yatra) ಹಮ್ಮಿಕೊಂಡಿದೆ.  ಈ ಯಾತ್ರೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಸಚಿವರುಗಳು ಇದನ್ನು ಉದ್ಘಾಟಿಸಲಿದ್ದಾರೆ. ಅಂದಹಾಗೆ, ಇವತ್ತು ಜನ ವಿಶ್ವಾಸ ಯಾತ್ರೆ ಬಿಜ್ನೋರ್​, ಮಥುರಾ, ಝಾನ್ಸಿ ಘಾಜಿಪುರ್​, ಅಂಬೇಡ್ಕರ್​ ನಗರ, ಬಲ್ಲಿಯಾದಿಂದ ಪ್ರಾರಂಭವಾಗಲಿದೆ. 

ಇಂದು ಅಂಬೇಡ್ಕರ್​ ನಗರದಲ್ಲಿ ಜನವಿಶ್ವಾಸ ಯಾತ್ರೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸುವರು. ಹಾಗೇ, ಮಥುರಾದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​,  ಝಾನ್ಸಿಯಲ್ಲಿ ಪ್ರಾರಂಭವಾಗಿ ಕಾನ್ಪುರದಲ್ಲಿ ಮುಕ್ತಾಯವಾಗುವ ಯಾತ್ರೆಯನ್ನು ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಬಿಜ್ನೊರ್​​ನ ಬಿಡುರ್​ಕೋಟಿಯಲ್ಲಿ ಶುರುವಾಗಿ, ರಾಂಪುರದಲ್ಲಿ ಕೊನೆಗೊಳ್ಳುವ ಯಾತ್ರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಮತ್ತು ಬಲ್ಲಿಯಾದಿಂದ ಪ್ರಾರಂಭವಾಗಿ, ಬಸ್ತಿಯಲ್ಲಿ ಮುಕ್ತಾಯಗೊಳ್ಳುವ ಯಾತ್ರೆಯನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಉದ್ಘಾಟನೆ ಮಾಡಲಿದ್ದಾರೆ.   ಹಾಗೇ, ಕೊನೇ ಯಾತ್ರೆ ಘಾಜಿಪುರ್​ದಲ್ಲಿ ಪ್ರಾರಂಭವಾಗಲಿದ್ದು, ಅಮೇಠಿಯಲ್ಲಿ ಮುಕ್ತಾಯಗೊಳ್ಳಲಿದೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಚಾಲನೆ ನೀಡಲಿದ್ದಾರೆ.

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಕಾಶಿ ವಿಶ್ವನಾಥ ಕಾರಿಡಾರ್​, ಸರಯೂ ನದಿ ರಾಷ್ಟ್ರೀಯ ನಾಲೆ, ರಸಗೊಬ್ಬರ ಕಾರ್ಖಾನೆಯಂಥ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹಾಗೇ ಇನ್ನೊಂದೆಡೆ ಕಾಂಗ್ರೆಸ್​ ಕೂಡ ಚುನಾವಣೆ ಗೆಲ್ಲಲು ಸಿದ್ಧತೆ ನಡೆಸುತ್ತಿದೆ. ಕಾಂಗ್ರೆಸ್​ ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಈಗಾಗಲೇ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಹಳೇ ಕ್ಷೇತ್ರ ಅಮೇಠಿಗೆ ಭೇಟಿ ನೀಡಿ, ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ ಎಂಬ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.    ಉತ್ತರಪ್ರದೇಶದಲ್ಲಿ 2017ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 403 ಕ್ಷೇತ್ರಗಳಲ್ಲಿ ಬಿಜೆಪಿ 312 ಕ್ಷೇತ್ರಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47, ಬಹುಜನ ಸಮಾಜವಾದಿ ಪಾರ್ಟಿ 19 ಮತ್ತು ಕಾಂಗ್ರೆಸ್ ಕೇವಲ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

Published On - 1:22 pm, Sun, 19 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!