AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 19, 2021 | 1:24 PM

Share

ಲಖನೌ: ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ (Uttar Pradesh Assembly Election 2022) ನಡೆಯಲಿದ್ದು,  ಅದರ ಬೆನ್ನಲ್ಲೇ ಬಿಜೆಪಿ ಇಂದಿನಿಂದ (ಡಿ.19) ರಾಜ್ಯದ ಒಟ್ಟು  ಆರು ಪ್ರದೇಶಗಳಲ್ಲಿ ಜನ ವಿಶ್ವಾಸ ಯಾತ್ರೆ(Jan Vishwas Yatra) ಹಮ್ಮಿಕೊಂಡಿದೆ.  ಈ ಯಾತ್ರೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಸಚಿವರುಗಳು ಇದನ್ನು ಉದ್ಘಾಟಿಸಲಿದ್ದಾರೆ. ಅಂದಹಾಗೆ, ಇವತ್ತು ಜನ ವಿಶ್ವಾಸ ಯಾತ್ರೆ ಬಿಜ್ನೋರ್​, ಮಥುರಾ, ಝಾನ್ಸಿ ಘಾಜಿಪುರ್​, ಅಂಬೇಡ್ಕರ್​ ನಗರ, ಬಲ್ಲಿಯಾದಿಂದ ಪ್ರಾರಂಭವಾಗಲಿದೆ. 

ಇಂದು ಅಂಬೇಡ್ಕರ್​ ನಗರದಲ್ಲಿ ಜನವಿಶ್ವಾಸ ಯಾತ್ರೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸುವರು. ಹಾಗೇ, ಮಥುರಾದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​,  ಝಾನ್ಸಿಯಲ್ಲಿ ಪ್ರಾರಂಭವಾಗಿ ಕಾನ್ಪುರದಲ್ಲಿ ಮುಕ್ತಾಯವಾಗುವ ಯಾತ್ರೆಯನ್ನು ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಬಿಜ್ನೊರ್​​ನ ಬಿಡುರ್​ಕೋಟಿಯಲ್ಲಿ ಶುರುವಾಗಿ, ರಾಂಪುರದಲ್ಲಿ ಕೊನೆಗೊಳ್ಳುವ ಯಾತ್ರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಮತ್ತು ಬಲ್ಲಿಯಾದಿಂದ ಪ್ರಾರಂಭವಾಗಿ, ಬಸ್ತಿಯಲ್ಲಿ ಮುಕ್ತಾಯಗೊಳ್ಳುವ ಯಾತ್ರೆಯನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಉದ್ಘಾಟನೆ ಮಾಡಲಿದ್ದಾರೆ.   ಹಾಗೇ, ಕೊನೇ ಯಾತ್ರೆ ಘಾಜಿಪುರ್​ದಲ್ಲಿ ಪ್ರಾರಂಭವಾಗಲಿದ್ದು, ಅಮೇಠಿಯಲ್ಲಿ ಮುಕ್ತಾಯಗೊಳ್ಳಲಿದೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಚಾಲನೆ ನೀಡಲಿದ್ದಾರೆ.

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಕಾಶಿ ವಿಶ್ವನಾಥ ಕಾರಿಡಾರ್​, ಸರಯೂ ನದಿ ರಾಷ್ಟ್ರೀಯ ನಾಲೆ, ರಸಗೊಬ್ಬರ ಕಾರ್ಖಾನೆಯಂಥ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹಾಗೇ ಇನ್ನೊಂದೆಡೆ ಕಾಂಗ್ರೆಸ್​ ಕೂಡ ಚುನಾವಣೆ ಗೆಲ್ಲಲು ಸಿದ್ಧತೆ ನಡೆಸುತ್ತಿದೆ. ಕಾಂಗ್ರೆಸ್​ ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಈಗಾಗಲೇ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಹಳೇ ಕ್ಷೇತ್ರ ಅಮೇಠಿಗೆ ಭೇಟಿ ನೀಡಿ, ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ ಎಂಬ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.    ಉತ್ತರಪ್ರದೇಶದಲ್ಲಿ 2017ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 403 ಕ್ಷೇತ್ರಗಳಲ್ಲಿ ಬಿಜೆಪಿ 312 ಕ್ಷೇತ್ರಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47, ಬಹುಜನ ಸಮಾಜವಾದಿ ಪಾರ್ಟಿ 19 ಮತ್ತು ಕಾಂಗ್ರೆಸ್ ಕೇವಲ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

Published On - 1:22 pm, Sun, 19 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ