ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಸೀಮಾಂಚಲ್ ಪ್ರದೇಶದ ಭಾಗವಾಗಿರುವ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ
Amit Shah
Image Credit source: PTI

Updated on: Feb 26, 2026 | 3:25 PM

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ” ಎಂದು ಮೋದಿ ಬಿಹಾರದ ಅರಾರಿಯಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು ಸಮೀಪಿಸುತ್ತಿವೆ. ಬಿಜೆಪಿ ಗೆಲ್ಲುತ್ತದೆ ಎಂದು ನನಗೆ ವಿಶ್ವಾಸವಿದೆ. ಹೊಸ ಸರ್ಕಾರ ರಚನೆಯಾದ ನಂತರ, ನಾವು ಪ್ರತಿಯೊಬ್ಬ ನುಸುಳುವವರನ್ನು ದೇಶ ಬಿಟ್ಟು ಓಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ವಿಶೇಷವಾಗಿ ಸೀಮಾಂಚಲ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕ್ರಮ ಆರಂಭವಾಗಲಿದೆ. ಕಳೆದ ವರ್ಷ ಇದೇ ವಿಷಯದ ಮೇಲೆ ನಾವು ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ

ಒಳನುಸುಳುವಿಕೆ ದೊಡ್ಡ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕರೆದ ಅಮಿತ್ ಶಾ, ಇದು ಜನಸಂಖ್ಯಾ ಸಮತೋಲನವನ್ನು ಅಡ್ಡಿಪಡಿಸುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ ಸಂಪನ್ಮೂಲಗಳನ್ನು ಹಾಳು ಮಾಡುತ್ತದೆ ಎಂದು ಹೇಳಿದ್ದಾರೆ.


“ನರೇಂದ್ರ ಮೋದಿ ಸರ್ಕಾರವು ಇಡೀ ದೇಶವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ದೃಢನಿಶ್ಚಯ ಹೊಂದಿದೆ ಮತ್ತು ಈ ಉಪಕ್ರಮವು ಶೀಘ್ರದಲ್ಲೇ ಇಡೀ ಸೀಮಾಂಚಲ್ ಪ್ರದೇಶದಲ್ಲಿ ಪ್ರಾರಂಭವಾಗಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

 

ಇದನ್ನೂ ಓದಿ: ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ

ಅಕ್ರಮ ವಲಸೆ ಮಾರ್ಗಗಳು, ದಾಖಲೆ ವಂಚನೆ ಜಾಲಗಳು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಗಳಿಗೆ ಹೆಸರುವಾಸಿಯಾದ ಬಾಂಗ್ಲಾದೇಶ-ನೇಪಾಳ ಗಡಿಯುದ್ದಕ್ಕೂ ಬಿಹಾರದ ಕಿಶನ್‌ಗಂಜ್, ಅರಾರಿಯಾ, ಪೂರ್ಣಿಯಾ ಮತ್ತು ಕತಿಹಾರ್ ಜಿಲ್ಲೆಗಳನ್ನು ಒಳಗೊಂಡಿರುವ ಸೀಮಾಂಚಲ್ ಪ್ರದೇಶದಲ್ಲಿ ಅಮಿತ್ ಶಾ 3 ದಿನಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:19 pm, Thu, 26 February 26

Follow Us