AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಪುರಾದಲ್ಲಿ ಶೇ.70ರಷ್ಟು ಪಂಚಾಯತ್ ಸ್ಥಾನಗಳನ್ನು ಅವಿರೋಧವಾಗಿ ಗೆದ್ದ ಬಿಜೆಪಿ

ತ್ರಿಪುರಾದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತೊಮ್ಮೆ ಗೆಲುವಿನ ಕಹಳೆ ಮೊಳಗಿಸಿದೆ. ರಾಜ್ಯದಲ್ಲಿ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಶೇ.70ರಷ್ಟು ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿ ಹಾಗೂ ಜಿಲ್ಲಾ ಕೌನ್ಸಿಲ್ ಸೇರಿದಂತೆ ಒಟ್ಟು 6,889 ಸ್ಥಾನಗಳಿವೆ. ಈ ಪೈಕಿ ಬಿಜೆಪಿ 4,805 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ.

ತ್ರಿಪುರಾದಲ್ಲಿ ಶೇ.70ರಷ್ಟು ಪಂಚಾಯತ್ ಸ್ಥಾನಗಳನ್ನು ಅವಿರೋಧವಾಗಿ ಗೆದ್ದ ಬಿಜೆಪಿ
ಬಿಜೆಪಿ
ನಯನಾ ರಾಜೀವ್
|

Updated on: Jul 24, 2024 | 8:22 AM

Share

ತ್ರಿಪುರಾದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತೊಮ್ಮೆ ಗೆಲುವಿನ ಕಹಳೆ ಮೊಳಗಿಸಿದೆ. ರಾಜ್ಯದಲ್ಲಿ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಶೇ.70ರಷ್ಟು ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿ ಹಾಗೂ ಜಿಲ್ಲಾ ಕೌನ್ಸಿಲ್ ಸೇರಿದಂತೆ ಒಟ್ಟು 6,889 ಸ್ಥಾನಗಳಿವೆ. ಈ ಪೈಕಿ ಬಿಜೆಪಿ 4,805 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ.

ಅಂದರೆ 71 ಪ್ರತಿಶತ ಸ್ಥಾನಗಳಲ್ಲಿ ಮತದಾನ ನಡೆಯುವುದಿಲ್ಲ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಅಸಿತ್ ಕುಮಾರ್ ದಾಸ್ ಮಾತನಾಡಿ, ಮತದಾನ ನಡೆಯಲಿರುವ 1,819 ಗ್ರಾಮ ಪಂಚಾಯಿತಿ ಸ್ಥಾನಗಳ ಪೈಕಿ ಬಿಜೆಪಿ 1,809 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಿಪಿಐ(ಎಂ) 1,222 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 731 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಭಾರತೀಯ ಜನತಾ ಪಕ್ಷದ ಮಿತ್ರ ಪಕ್ಷ ತಿಪ್ರಾ ಮೋಥಾ 138 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಅಸಿತ್ ಕುಮಾರ್ ದಾಸ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮೃತಪಟ್ಟಿರುವ ಪಶ್ಚಿಮ ತ್ರಿಪುರಾ ಜಿಲ್ಲೆಯ ಮಹೇಶಖಲಾ ಪಂಚಾಯತ್‌ನ ಸ್ಥಾನಕ್ಕೆ ತಕ್ಷಣದ ಚುನಾವಣೆ ನಡೆಯುವುದಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬಳ್ಳಾರಿಯಲ್ಲಿ ಹೆಚ್ಚಾಯ್ತು ಉಪ ಚುನಾವಣೆ ಕಾವು; ಸಂಡೂರನ್ನು ವಶಪಡಿಸಿಕೊಳ್ಳಲು ಬಿಜೆಪಿ ಪ್ಲಾನ್​​

ಪಂಚಾಯತಿ ಸಮಿತಿಗಳಲ್ಲಿ ಒಟ್ಟು 423 ಸ್ಥಾನಗಳಲ್ಲಿ ಬಿಜೆಪಿ 235 ಅಥವಾ 55 ಪ್ರತಿಶತ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ ಎಂದು ದಾಸ್ ಹೇಳಿದರು. ಆದರೆ, ಈಗ 188 ಸ್ಥಾನಗಳಿಗೆ ಮತದಾನ ನಡೆಯಬೇಕಿದೆ.

116 ಜಿಲ್ಲಾ ಪರಿಷತ್ ಸ್ಥಾನಗಳ ಪೈಕಿ 20ರಲ್ಲಿ ಬಿಜೆಪಿ ಅವಿರೋಧವಾಗಿ ಗೆದ್ದಿದೆ ಬಿಜೆಪಿ ಎಲ್ಲಾ 188 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಿಪಿಐ(ಎಂ) 148 ಮತ್ತು ಕಾಂಗ್ರೆಸ್ 98 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇದರ ಹೊರತಾಗಿ ರಾಜ್ಯದಲ್ಲಿ ಬಿಜೆಪಿಯ ಮಿತ್ರ ಪಕ್ಷ ತಿಪ್ರಾ ಮೋಥಾ 11 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಅಸಿತ್ ಕುಮಾರ್ ದಾಸ್ ಹೇಳಿದ್ದಾರೆ.

116 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಬಿಜೆಪಿ ಅವಿರೋಧವಾಗಿ 17 ಪ್ರತಿಶತವನ್ನು ಗೆದ್ದಿದೆ ಎಂದು ದಾಸ್ ಹೇಳಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಅವಿರೋಧವಾಗಿ ಶೇಕಡಾ 96 ಸ್ಥಾನಗಳನ್ನು ಗೆದ್ದಿತ್ತು.

ಮತದಾನ ನಡೆಯಲಿರುವ ಎಲ್ಲಾ 96 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಸಿಪಿಐ(ಎಂ) 81 ಅಭ್ಯರ್ಥಿಗಳನ್ನು ಮತ್ತು ಕಾಂಗ್ರೆಸ್ 76 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದರಲ್ಲಿ ಹೆಸರುಗಳನ್ನು ಹಿಂಪಡೆಯಲು ಜುಲೈ 22 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 8 ರಂದು ಮತದಾನ ನಡೆಯಲಿದೆ. ಅಲ್ಲದೆ ಆಗಸ್ಟ್ 12 ರಂದು ಮತ ಎಣಿಕೆ ನಡೆಯಲಿದೆ. ಆದರೆ, ಕಳೆದ ಚುನಾವಣೆಯಲ್ಲಿ ಮೂರು ಹಂತದ ಪಂಚಾಯಿತಿ ವ್ಯವಸ್ಥೆಯಲ್ಲಿ ಬಿಜೆಪಿ ಅವಿರೋಧವಾಗಿ ಶೇ.96 ಸ್ಥಾನ ಗಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ