AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ತಳ್ಳಿದ್ದರಿಂದ ನನ್ನ ಘನತೆಗೆ ಧಕ್ಕೆಯಾಗಿದೆ; ನಾಗಾಲ್ಯಾಂಡ್‌ನ ಬಿಜೆಪಿ ಸಂಸದೆ ಗಂಭೀರ ಆರೋಪ

ಕಾಂಗ್ರೆಸ್ ಸಂಸದ ನನ್ನ ಹತ್ತಿರ ಬಂದು, ಜೋರಾಗಿ ಜಗಳವಾಡುತ್ತಾ ಮೈಮುಟ್ಟಿ ತಳ್ಳಿದ್ದಾರೆ. ಅವರ ಅನುಚಿತ ವರ್ತನೆಯಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದೆ. ರಾಜ್ಯಸಭಾ ಅಧ್ಯಕ್ಷರು ನನಗೆ ರಕ್ಷಣೆ ಒದಗಿಸಬೇಕು ಎಂದು ಬಿಜೆಪಿಯ ನಾಗಾಲ್ಯಾಂಡ್ ರಾಜ್ಯಸಭಾ ಸದಸ್ಯೆ ಫಾಂಗ್ನಾನ್ ಕೊನ್ಯಾಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಮೊದಲು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಳ್ಳಿದ್ದರಿಂದ ನನಗೆ ಗಾಯವಾಗಿದೆ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ತಳ್ಳಿದ್ದರಿಂದ ನನ್ನ ಘನತೆಗೆ ಧಕ್ಕೆಯಾಗಿದೆ; ನಾಗಾಲ್ಯಾಂಡ್‌ನ ಬಿಜೆಪಿ ಸಂಸದೆ ಗಂಭೀರ ಆರೋಪ
Phangnon Konyak
ಸುಷ್ಮಾ ಚಕ್ರೆ
|

Updated on:Dec 19, 2024 | 5:25 PM

Share

ನವದೆಹಲಿ: ಈ ಬಾರಿಯ ಚಳಿಗಾಲದ ಅಧಿವೇಶನವು ಆಡಳಿತ ಮತ್ತು ಪ್ರತಿಪಕ್ಷಗಳ ಪೀಠಗಳ ಮೇಲೆ ದಾಳಿ ಮಾಡುವ ಮೂಲಕ ಹಲವಾರು ವಿವಾದಗಳೊಂದಿಗೆ ಮುಕ್ತಾಯಗೊಳ್ಳುತ್ತಿದೆ. ರಾಹುಲ್ ಗಾಂಧಿ ತನ್ನ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದು, ತನ್ನ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿಯ ಮಹಿಳಾ ಸಂಸದೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ದೂರನ್ನೂ ನೀಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಆವರಣದಲ್ಲಿ ತನ್ನೊಂದಿಗೆ ಅನುಚಿತ ವರ್ತನೆ ಮಾಡಿದ್ದಾರೆ ಎಂದು ನಾಗಾಲ್ಯಾಂಡ್‌ನ ಬಿಜೆಪಿ ಸಂಸದೆ ಫಾಂಗ್ನಾನ್ ಕೊನ್ಯಾಕ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಇಬ್ಬರು ಬಿಜೆಪಿಯ ಸಂಸದರಿಗೆ ಗಾಯಗಳನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿದ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಈ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ನಾಗಾಲ್ಯಾಂಡ್‌ನಿಂದ ರಾಜ್ಯಸಭೆಗೆ ಚುನಾಯಿತರಾದ ಮೊದಲ ಮಹಿಳೆ ಫಾಂಗ್ನಾನ್ ಕೊನ್ಯಾಕ್, ರಾಹುಲ್ ಗಾಂಧಿ ಅವರು ಸಂಸತ್ತಿನ ಪ್ರವೇಶದ್ವಾರದ ಬಳಿ ನನ್ನ ಬಳಿ ಬಂದು, ಜಗಳವಾಡಿದ್ದಾರೆ. ಈ ವೇಳೆ ಮೈ ಮುಟ್ಟಿ ಅನುಚಿತ ವರ್ತನೆ ತೋರಿದ್ದಾರೆ. ಇದರಿಂದ ನನಗೆ ಮುಜುಗರವಾಗಿದೆ ಮತ್ತು ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸತ್ ಭವನದ ಮಕರ ದ್ವಾರದ ಮೆಟ್ಟಿಲುಗಳ ಬಳಿ ಭದ್ರತಾ ಸಿಬ್ಬಂದಿ ಪ್ರವೇಶ ದ್ವಾರಕ್ಕೆ ಮಾರ್ಗವನ್ನು ರಚಿಸಿದಾಗ ತಾನು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೆ ಎಂದು ನಾಗಾಲ್ಯಾಂಡ್ ಸಂಸದೆ ಹೇಳಿದ್ದಾರೆ. ಆಗ ಇದ್ದಕ್ಕಿದ್ದಂತೆ, ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪಕ್ಷದ ಸದಸ್ಯರು ನನ್ನ ಮುಂದೆ ಬಂದರು. ಅವರಿಗಾಗಿ ಒಂದು ಮಾರ್ಗವನ್ನು ರಚಿಸಲಾಗಿದ್ದರೂ ಬೇಕೆಂದೇ ನನ್ನೆದುರು ಬಂದು ಅನುಚಿತವಾಗಿ ವರ್ತಿಸಿದರು ಎಂದು ದೂರಿನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಭಾರತೀಯ ಮೀನುಗಾರರ ಬಂಧನದ ಬಗ್ಗೆ ಚರ್ಚಿಸಲು ಸಚಿವ ಜೈಶಂಕರ್​ಗೆ ಪತ್ರ ಬರೆದ ರಾಹುಲ್ ಗಾಂಧಿ

ಈ ಎಲ್ಲ ಗದ್ದಲದ ನಡುವೆಯೇ ರಾಜ್ಯಸಭೆ ಕಲಾಪವನ್ನು 1 ದಿನದ ಮಟ್ಟಿಗೆ ಮುಂದೂಡಲಾಯಿತು. ಸಂಸತ್ತಿನ ಪ್ರವೇಶದ ಮೆಟ್ಟಿಲುಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಮಹಿಳಾ ಸಂಸದರ ವಿರುದ್ಧ ಬಲಪ್ರಯೋಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಕಿರಣ್ ರಿಜಿಜು ಆರೋಪಿಸಿದ ನಂತರ ಗದ್ದಲದ ನಡುವೆ ರಾಜ್ಯಸಭೆಯ ಕಲಾಪವನ್ನು ಗುರುವಾರ ದಿನಕ್ಕೆ ಮುಂದೂಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 19 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ