AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರ ಹತ್ಯೆ

ಇದು ಹೇಡಿತನದ ಕೃತ್ಯ ಎಂದು ಸಚಿವ ಲುಖೋಯ್ ಹೇಳಿದ್ದಾರೆ "ಅವರ ತಪ್ಪುಗಳು ಏನೇ ಇರಲಿ, ಅವರ ಮಾರ್ಗಗಳನ್ನು ಸರಿಪಡಿಸಲು ಅವರಿಗೆ ಅವಕಾಶ ನೀಡಬೇಕು. ಕೊಲ್ಲುವುದು ಪರಿಹಾರವಲ್ಲ'' ಎಂದು ಸಚಿವರು ಹೇಳಿದ್ದಾರೆ.

ಮಣಿಪುರ: ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರ ಹತ್ಯೆ
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jan 10, 2022 | 5:53 PM

Share

ಇಂಫಾಲ್: ಮಣಿಪುರದ ಸಚಿವರೊಬ್ಬರಿಗೆ (Manipur) ನಿಕಟವಾಗಿರುವ ಬಿಜೆಪಿ (BJP) ಕಾರ್ಯಕರ್ತ ಮತ್ತು ಅವರ ಸೋದರ ಸಂಬಂಧಿಯನ್ನು ಇಂಫಾಲ್ ಪಶ್ಚಿಮ ಜಿಲ್ಲೆಯ ಸಮುರೌನಲ್ಲಿ ಭಾನುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು ಇದು ಈಶಾನ್ಯ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh)ಅವರು ಹೇಳಿದ್ದಾರೆ. ಕೃಷಿ ಸಚಿವ ಓ ಲುಖೋಯ್  (O Lukhoi)ಅವರ ನಿಕಟವರ್ತಿ ಅಬುಜಮ್ ಜಾನ್ (57) ಮತ್ತು ಅವರ ಸೋದರಸಂಬಂಧಿ ಅಬುಜಮ್ ಶಶಿಕಾಂತ, ಇಂಡಿಯಾ ರಿಸರ್ವ್ ಬೆಟಾಲಿಯನ್‌ನಲ್ಲಿ ಹವಿಲ್ದಾರ್ ಆಗಿದ್ದು, ಜಾನ್ ಅವರ ಮನೆಯ ಬಳಿ ರಾತ್ರಿ 10 ಗಂಟೆಗೆ ಸಮುರೌ ಬಜಾರ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರು ಇಂಫಾಲ್‌ನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾನ್ ಅವರ ಪತ್ನಿ ಬಿಮೋ ಪ್ರಕಾರ  ಅವರ ಪತಿ ರಾತ್ರಿ ಊಟ ಮುಗಿಸಿ ಹೊರಗೆ ಹೋಗಿದ್ದರು ಮತ್ತು ಸ್ವಲ್ಪ ಸಮಯದವರೆಗೆ ಮನೆಗೆ ಹಿಂತಿರುಗಲಿಲ್ಲ. ನಾನು ಅವರನ್ನು ಹುಡುಕುತ್ತಾ ಹೊರಗೆ ಹೋದಾದ ಜಾನ್ ಶಶಿಕಾಂತನೊಂದಿಗೆ ಹರಟೆ ಹೊಡೆಯುವುದನ್ನು ಕಂಡೆ. ಕೆಲವು ಕ್ಷಣಗಳ ನಂತರ, ಒಬ್ಬ ವ್ಯಕ್ತಿ ಇಬ್ಬರನ್ನು ಸಮೀಪಿಸುತ್ತಿರುವುದನ್ನು ತಾನು ನೋಡಿದೆ. ನಂತರ ಗುಂಡಿನ ಸದ್ದು ಕೇಳಿತು ಎಂದು ಬಿಮೋ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮೃತರ ಕುಟುಂಬಗಳನ್ನು ಭೇಟಿ ಮಾಡಿದ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಘಟನೆಯನ್ನು ಖಂಡಿಸಿದ್ದು ಇದು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇದು ಹೇಡಿತನದ ಕೃತ್ಯ ಎಂದು ಸಚಿವ ಲುಖೋಯ್ ಹೇಳಿದ್ದಾರೆ “ಅವರ ತಪ್ಪುಗಳು ಏನೇ ಇರಲಿ, ಅವರ ಮಾರ್ಗಗಳನ್ನು ಸರಿಪಡಿಸಲು ಅವರಿಗೆ ಅವಕಾಶ ನೀಡಬೇಕು. ಕೊಲ್ಲುವುದು ಪರಿಹಾರವಲ್ಲ” ಎಂದು ಸಚಿವರು ಹೇಳಿದ್ದಾರೆ.

ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಮುರೌನ ಸ್ಥಳೀಯರು ರಸ್ತೆಯಲ್ಲಿ ಟೈರ್‌ಗಳನ್ನು ಸುಡುವ ಮೂಲಕ ಆ ಪ್ರದೇಶದ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದರು. ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಹೆಚ್ಚಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಹೀರೋಕ್ ತೌಬಲ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್​​ಗೆ ಕೆಟ್ಟದಾಗಿ ಪ್ರತಿಕ್ರಿಯಿಸಿದ ನಟ ಸಿದ್ಧಾರ್ಥ್ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್​​ಗೆ ಮಹಿಳಾ ಆಯೋಗ ಮನವಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?