AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರ ಹತ್ಯೆ

ಇದು ಹೇಡಿತನದ ಕೃತ್ಯ ಎಂದು ಸಚಿವ ಲುಖೋಯ್ ಹೇಳಿದ್ದಾರೆ "ಅವರ ತಪ್ಪುಗಳು ಏನೇ ಇರಲಿ, ಅವರ ಮಾರ್ಗಗಳನ್ನು ಸರಿಪಡಿಸಲು ಅವರಿಗೆ ಅವಕಾಶ ನೀಡಬೇಕು. ಕೊಲ್ಲುವುದು ಪರಿಹಾರವಲ್ಲ'' ಎಂದು ಸಚಿವರು ಹೇಳಿದ್ದಾರೆ.

ಮಣಿಪುರ: ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರ ಹತ್ಯೆ
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jan 10, 2022 | 5:53 PM

Share

ಇಂಫಾಲ್: ಮಣಿಪುರದ ಸಚಿವರೊಬ್ಬರಿಗೆ (Manipur) ನಿಕಟವಾಗಿರುವ ಬಿಜೆಪಿ (BJP) ಕಾರ್ಯಕರ್ತ ಮತ್ತು ಅವರ ಸೋದರ ಸಂಬಂಧಿಯನ್ನು ಇಂಫಾಲ್ ಪಶ್ಚಿಮ ಜಿಲ್ಲೆಯ ಸಮುರೌನಲ್ಲಿ ಭಾನುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು ಇದು ಈಶಾನ್ಯ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh)ಅವರು ಹೇಳಿದ್ದಾರೆ. ಕೃಷಿ ಸಚಿವ ಓ ಲುಖೋಯ್  (O Lukhoi)ಅವರ ನಿಕಟವರ್ತಿ ಅಬುಜಮ್ ಜಾನ್ (57) ಮತ್ತು ಅವರ ಸೋದರಸಂಬಂಧಿ ಅಬುಜಮ್ ಶಶಿಕಾಂತ, ಇಂಡಿಯಾ ರಿಸರ್ವ್ ಬೆಟಾಲಿಯನ್‌ನಲ್ಲಿ ಹವಿಲ್ದಾರ್ ಆಗಿದ್ದು, ಜಾನ್ ಅವರ ಮನೆಯ ಬಳಿ ರಾತ್ರಿ 10 ಗಂಟೆಗೆ ಸಮುರೌ ಬಜಾರ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರು ಇಂಫಾಲ್‌ನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾನ್ ಅವರ ಪತ್ನಿ ಬಿಮೋ ಪ್ರಕಾರ  ಅವರ ಪತಿ ರಾತ್ರಿ ಊಟ ಮುಗಿಸಿ ಹೊರಗೆ ಹೋಗಿದ್ದರು ಮತ್ತು ಸ್ವಲ್ಪ ಸಮಯದವರೆಗೆ ಮನೆಗೆ ಹಿಂತಿರುಗಲಿಲ್ಲ. ನಾನು ಅವರನ್ನು ಹುಡುಕುತ್ತಾ ಹೊರಗೆ ಹೋದಾದ ಜಾನ್ ಶಶಿಕಾಂತನೊಂದಿಗೆ ಹರಟೆ ಹೊಡೆಯುವುದನ್ನು ಕಂಡೆ. ಕೆಲವು ಕ್ಷಣಗಳ ನಂತರ, ಒಬ್ಬ ವ್ಯಕ್ತಿ ಇಬ್ಬರನ್ನು ಸಮೀಪಿಸುತ್ತಿರುವುದನ್ನು ತಾನು ನೋಡಿದೆ. ನಂತರ ಗುಂಡಿನ ಸದ್ದು ಕೇಳಿತು ಎಂದು ಬಿಮೋ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮೃತರ ಕುಟುಂಬಗಳನ್ನು ಭೇಟಿ ಮಾಡಿದ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಘಟನೆಯನ್ನು ಖಂಡಿಸಿದ್ದು ಇದು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇದು ಹೇಡಿತನದ ಕೃತ್ಯ ಎಂದು ಸಚಿವ ಲುಖೋಯ್ ಹೇಳಿದ್ದಾರೆ “ಅವರ ತಪ್ಪುಗಳು ಏನೇ ಇರಲಿ, ಅವರ ಮಾರ್ಗಗಳನ್ನು ಸರಿಪಡಿಸಲು ಅವರಿಗೆ ಅವಕಾಶ ನೀಡಬೇಕು. ಕೊಲ್ಲುವುದು ಪರಿಹಾರವಲ್ಲ” ಎಂದು ಸಚಿವರು ಹೇಳಿದ್ದಾರೆ.

ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಮುರೌನ ಸ್ಥಳೀಯರು ರಸ್ತೆಯಲ್ಲಿ ಟೈರ್‌ಗಳನ್ನು ಸುಡುವ ಮೂಲಕ ಆ ಪ್ರದೇಶದ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದರು. ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಹೆಚ್ಚಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಹೀರೋಕ್ ತೌಬಲ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್​​ಗೆ ಕೆಟ್ಟದಾಗಿ ಪ್ರತಿಕ್ರಿಯಿಸಿದ ನಟ ಸಿದ್ಧಾರ್ಥ್ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್​​ಗೆ ಮಹಿಳಾ ಆಯೋಗ ಮನವಿ

Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?