Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣಾನಿಧಿ ಮೊಮ್ಮಗ ಉದಯನಿಧಿ ಏಮ್ಸ್​​ ಕಾಂಪೌಂಡ್​ನಿಂದ​​ ಇಟ್ಟಿಗೆ ಕದ್ದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತ

Tamil Nadu Election 2021: ಇನ್ನು ಬಿಜೆಪಿ ಕಾರ್ಯಕರ್ತ ನೀಡಿದ ದೂರಿಗೆ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್​, ನಾನು ಒಂದು ಇಟ್ಟಿಗೆ ಹಿಡಿದುಕೊಂಡು ಬಂದಿದ್ದಕ್ಕೆ ಬಿಜೆಪಿ ದೂರು ನೀಡಿದೆ. ಅದರಲ್ಲೇ ಗೊತ್ತಾಗುತ್ತದೆ ಏಮ್ಸ್​ ಎಂದರೆ ಕೇವಲ ಇಟ್ಟಿಗೆ ಹೊರತು, ಇನ್ನೇನಲ್ಲ ಎಂಬುದು ಎಂದು ಮತ್ತೆ ಟೀಕಿಸಿದ್ದಾರೆ.

ಕರುಣಾನಿಧಿ ಮೊಮ್ಮಗ ಉದಯನಿಧಿ ಏಮ್ಸ್​​ ಕಾಂಪೌಂಡ್​ನಿಂದ​​ ಇಟ್ಟಿಗೆ ಕದ್ದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತ
ಪ್ರಚಾರದ ವೇಳೆ ಇಟ್ಟಿಗೆ ತೋರಿಸಿದ ಉದಯನಿಧಿ
Follow us
Lakshmi Hegde
|

Updated on: Mar 27, 2021 | 6:46 PM

ಮಧುರೈ: ಡಿಎಂಕೆ ಯುವ ಸಂಘಟನೆ ನಾಯಕ, ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಇಟ್ಟಿಗೆ ಕದ್ದಿದ್ದಾರೆಂದು ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಉದಯನಿಧಿ ಅವರು ಪ್ರಚಾರದ ವೇಳೆ ಇಟ್ಟಿಗೆಯನ್ನು ಹಿಡಿದುಕೊಂಡಿದ್ದರು. ಅದಾದ ಬಳಿಕ ಠಾಣೆ ಮೆಟ್ಟಿಲೇರಿದ ಬಿಜೆಪಿ ಕಾರ್ಯಕರ್ತ, ಏಮ್ಸ್​ ನಿರ್ಮಾಣ ಆಗುತ್ತಿರುವ ಸ್ಥಳದಿಂದ ಇಟ್ಟಿಗೆ ಕಳವಾಗಿದೆ ಎಂದು ದೂರಿದ್ದಾರೆ.

ಮಧುರೈನಲ್ಲಿ ಚುನಾವಣಾ ರ‍್ಯಾಲಿ ನಡೆಸಿದ್ದ ಉದಯನಿಧಿ, ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿಯನ್ನು ಟೀಕಿಸಿದ್ದರು. ಮಧುರೈನಲ್ಲಿ ಏಮ್ಸ್​ ನಿರ್ಮಾಣ ಕಾರ್ಯ ಇಟ್ಟಿಗೆವರೆಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದರು. ನೀವು ಈ ಇಟ್ಟಿಗೆಗಳನ್ನೇ ಏಮ್ಸ್​ ಅಂದುಕೊಳ್ಳಬಹುದು ಎಂದಿದ್ದರು. ಅಲ್ಲದೆ, ಇಟ್ಟಿಗೆಯನ್ನು ಹಿಡಿದು ಜನಸಮೂಹಕ್ಕೆ ತೋರಿಸಿದ್ದಾರೆ. ಆಗ ನೆರೆದಿದ್ದ ಜನರು ನಕ್ಕಿದ್ದಾರೆ. ನಂತರ ಅದನ್ನು ತಮ್ಮ ಟ್ವಿಟರ್​ನಲ್ಲಿ ಕೂಡ ಉದಯನಿಧಿ ಶೇರ್​ ಮಾಡಿಕೊಂಡಿದ್ದರು.

ಇಟ್ಟಿಗೆಯನ್ನು ಪ್ರಚಾರಕ್ಕೆ ತೆಗೆದುಕೊಂಡುಹೋಗಿದ್ದ ಉದಯನಿಧಿ, ನೋಡಿ ನನ್ನೊಂದಿಗೆ ಏಮ್ಸ್​ ಆಸ್ಪತ್ರೆಯನ್ನು ತಂದಿದ್ದೇನೆ. ಏಮ್ಸ್​ಗಾಗಿ ನಿಗದಿಪಡಿಸಲಾದ 250 ಎಕರೆ ಭೂಮಿಯಲ್ಲಿ ಎಲ್ಲ ಇಟ್ಟಿಗೆಗಳೇ ಇದ್ದವು. ಅದರಲ್ಲಿ ಒಂದನ್ನು ನಾನು ಇಲ್ಲಿ ತಂದಿದ್ದೇನೆ. ಏಮ್ಸ್​ ನಿರ್ಮಾಣ ಮಾಡುತ್ತೇವೆ ಎಂದಿದ್ದ ಬಿಜೆಪಿ ಮತ್ತು ಎಐಎಡಿಎಂಕೆಗಳು ಕಳೆದ 2ವರ್ಷಗಳಲ್ಲಿ ಏನು ಮಾಡಿದವು? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು. ಈ ಮೂಲಕ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಬರೀ ಭರವಸೆಯನ್ನಷ್ಟೇ ಕೊಡುತ್ತದೆ ಹೊರತು, ಅದನ್ನು ನೆರವೇರಿಸುವುದಿಲ್ಲ ಎಂದು ದೂಷಿಸಿದ್ದರು. ಈಗ ಅದನ್ನೇ ಮುಂದಾಗಿಟ್ಟುಕೊಂಡ ಬಿಜೆಪಿ ಕಾರ್ಯಕರ್ತನೊಬ್ಬ, ಏಮ್ಸ್​ ನಿರ್ಮಾಣವಾಗುತ್ತಿರುವ ಜಾಗದಿಂದ ಇಟ್ಟಿಗೆ ಕಳವಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನು ಬಿಜೆಪಿ ಕಾರ್ಯಕರ್ತ ನೀಡಿದ ದೂರಿಗೆ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್​, ನಾನು ಒಂದು ಇಟ್ಟಿಗೆ ಹಿಡಿದುಕೊಂಡು ಬಂದಿದ್ದಕ್ಕೆ ಬಿಜೆಪಿ ದೂರು ನೀಡಿದೆ. ಅದರಲ್ಲೇ ಗೊತ್ತಾಗುತ್ತದೆ ಏಮ್ಸ್​ ಎಂದರೆ ಕೇವಲ ಇಟ್ಟಿಗೆ ಹೊರತು, ಇನ್ನೇನಲ್ಲ ಎಂಬುದು ಎಂದು ಮತ್ತೆ ಟೀಕಿಸಿದ್ದಾರೆ. ಮಧುರೈನಲ್ಲಿ ಏಮ್ಸ್​ ಶಾಖೆ ನಿರ್ಮಾಣ ಮಾಡುವುದಾಗಿ 2019ರಲ್ಲಿಯೇ ಎಐಎಡಿಎಂಕೆ-ಬಿಜೆಪಿ ಘೋಷಣೆ ಮಾಡಿವೆ. ಅದೇ ವರ್ಷ ಜನವರಿಲ್ಲಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆಯನ್ನೂ ನೆರವೇರಿಸಿ, ಅಡಿಗಲ್ಲು ಸ್ಥಾಪನೆಯೂ ಆಗಿತ್ತು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟ್ರಿ

Tamil Nadu Election 2021: ಭರ್ಜರಿ ಡ್ಯಾನ್ಸ್​ ಮಾಡಿ, ಸ್ಕೂಟರ್​ ರೈಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಸಚಿವೆ ಸ್ಮೃತಿ ಇರಾನಿ

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?