AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಬಟಾಟೆ (ಆಲೂಗಡ್ಡೆ) ನೀಡಿದ್ದಾರೆ.

ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು
ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲುಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು
Rakesh Nayak Manchi
|

Updated on:Mar 05, 2024 | 8:04 PM

Share

ಭೋಪಾಲ್, ಮಾ.5: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು (BJP Workers) ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಬಟಾಟೆ (ಆಲೂಗಡ್ಡೆ/ Potato) ನೀಡಿದ್ದಾರೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಇರುವಂತೆ, ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರಿದ್ದಲ್ಲಿಗೆ ಹೋದರು.

ಇದನ್ನೂ ಓದಿ: WITT Satta Sammelan: 10 ವರ್ಷ ಅಧಿಕಾರದಲ್ಲಿದ್ದರೂ ಎಂಎಸ್​ಪಿ ಗ್ಯಾರಂಟಿ ಯಾಕೆ ಕೊಡಲಿಲ್ಲ? ರಾಹುಲ್ ಗಾಂಧಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಶ್ನೆ

ಈ ವೇಳೆ ಕಾರ್ಯಕರ್ತರು ಜೈ ಶ್ರೀರಾಮ್, ಜೈ ಶ್ರೀರಾಮ್, ಮೋದಿ-ಮೋದಿ ಎಂದು ಘೋಷಣೆಗಳನ್ನು ಕೂಗಿದರು. ಈ ನಡುವೆಯೂ ರಾಹುಲ್ ಗಾಂಧಿ ಅವರು ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದರು. ಈ ವೇಳೆ ಕೆಲವು ಕಾರ್ಯಕರ್ತರು ರಾಹುಲ್ ಗಾಂಧಿಗೆ ಚಿನ್ನ ತಯಾರಿಸಲು ಆಲೂಗಡ್ಡೆಯನ್ನು ನೀಡಿದರು. ರಾಹುಲ್ ಗಾಂಧಿ ಒಡಿಶಾ ಪ್ರವಾಸದ ವೇಳೆ ನಡೆದ ಘಟನೆ ಇದಾಗಿದೆ ಎನ್ನಲಾಗುತ್ತಿದೆ.

ಆಲೂಗಡ್ಡೆಯಿಂದ ಚಿನ್ನ ತಯಾರಿಸುವ ಮೆಷೀನ್ ಬಗ್ಗೆ ಹೇಳಿದ್ದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು 2017 ರಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಗುಜರಾತ್ ಭಾಷಣ ಮಾಡಿದ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, “ಮೆಷೀನ್​ನ ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೋ ವೈರಲ್ ನಂತರ ಬಿಜೆಪಿ ನಾಯಕರು, ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಲು ಆರಂಭಿಸಿದ್ದರು. ಅದಾಗ್ಯೂ, ಆಲೂಗಡ್ಡೆ ಹೇಳಿಕೆಯ ವಿಡಿಯೋ ಅರ್ಧ ಮಾತ್ರ ವೈರಲ್ ಆಗಿದೆ ಎನ್ನಲಾಗುತ್ತಿದೆ. ಆಲೂಗಡ್ಡೆಯಿಂದ ಚಿನ್ನ ತಯಾರಿಸುವ ಮೆಷೀನ್ ಬಗ್ಗೆ ಮೋದಿ ರೈತರಿಗೆ ಹೇಳಿದ ಮಾತನ್ನು ರಾಹುಲ್ ಹೇಳಿದ್ದಾರಷ್ಟೆ ಎಂಬ ವಾದವೂ ಇದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Tue, 5 March 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?