AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿ ದೆಹಲಿ ವಿಧಾನಸಭೆಯ ಹೊರಗಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ದೆಹಲಿ ವಿಧಾನಸಭೆ ಆವರಣದ ಹೊರಗೆ ಹಾಜರಿದ್ದ ಪಕ್ಷದ ಕಾರ್ಯಕರ್ತರು ಎಎಪಿ ಮುಖ್ಯಸ್ಥರ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಭದ್ರತಾ ಸಿಬ್ಬಂದಿ ಹಾಕಿದ್ದ ಬ್ಯಾರಿಕೇಡ್ ಅನ್ನು ಭೇದಿಸಲು ಪ್ರಯತ್ನಿಸಿದರು.

ಅರವಿಂದ ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿ ದೆಹಲಿ ವಿಧಾನಸಭೆಯ ಹೊರಗಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:Apr 17, 2023 | 3:20 PM

Share

ಅಬಕಾರಿ ನೀತಿ ಪ್ರಕರಣಕ್ಕೆ (Excise policy case)ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಸಿಬಿಐ (CBI) ವಿಚಾರಣೆಗೊಳಪಡಿಸಿದ ನಂತರ ಬಿಜೆಪಿ (BJP) ಕಾರ್ಯಕರ್ತರು ಸೋಮವಾರ ದೆಹಲಿ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ವಿಧಾನಸಭೆ ಆವರಣದ ಹೊರಗೆ ಹಾಜರಿದ್ದ ಪಕ್ಷದ ಕಾರ್ಯಕರ್ತರು ಎಎಪಿ ಮುಖ್ಯಸ್ಥರ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಭದ್ರತಾ ಸಿಬ್ಬಂದಿ ಹಾಕಿದ್ದ ಬ್ಯಾರಿಕೇಡ್ ಅನ್ನು ಭೇದಿಸಲು ಪ್ರಯತ್ನಿಸಿದರು. ಬೆಳಗ್ಗೆ 11 ಗಂಟೆಯ ನಂತರ ಆರಂಭವಾದ ವಿಧಾನಸಭೆಯ ಅಧಿವೇಶನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಕೇಜ್ರಿವಾಲ್ ಅವರು ಸಂಜೆ 4 ಗಂಟೆಗೆ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು, ತನಿಖಾ ಸಂಸ್ಥೆಗಳು ತಮ್ಮ ಕುಣಿಕೆಯನ್ನು ಬಿಗಿಗೊಳಿಸುತ್ತಿರುವುದರಿಂದ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ನಾನು ಇಂದು ಸಂಜೆ 4 ಗಂಟೆಗೆ ದೆಹಲಿ ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ವೀಕ್ಷಿಸಿ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಕರೆಯುವುದಕ್ಕೆ ಆಕ್ಷೇಪ ಎತ್ತಿದ್ದಕ್ಕಾಗಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ವಿರುದ್ಧ ಆಡಳಿತಾರೂಢ ಎಎಪಿ ಶಾಸಕರು ಸೋಮವಾರ ವಾಗ್ದಾಳಿ ನಡೆಸಿ, ಸದನಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ. ಸದನದ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಯತ್ನಗಳು ನಡೆಯುತ್ತಿವೆ ಎಂದು ಉಪಸಭಾಪತಿ ರಾಖಿ ಬಿರ್ಲಾ ಆರೋಪಿಸಿದ್ದು, ಈ ವಿಷಯವನ್ನು ವಿಶೇಷಾಧಿಕಾರಗಳ ಸಮಿತಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 17 ರಂದು ದೆಹಲಿ ಅಸೆಂಬ್ಲಿಯ ಒಂದು ದಿನದ ಅವಧಿಯ ಅಧಿವೇಶನವನ್ನು ಕರೆಯುವುದಕ್ಕೆ ಸಕ್ಸೇನಾ ಆಕ್ಷೇಪಿಸಿದ್ದರು.

ಜಿಎನ್‌ಸಿಟಿಡಿ ಕಾಯಿದೆ, GNCTD ಕಾಯಿದೆ, 1991 ರ ಯಾವ ಸಂದರ್ಭಗಳಲ್ಲಿ ಮತ್ತು ಯಾವ ನಿಬಂಧನೆಯ ಅಡಿಯಲ್ಲಿ ಏಳನೇ ವಿಧಾನಸಭೆಯ ನಾಲ್ಕನೇ ಅಧಿವೇಶನದ (ಬಜೆಟ್ ಅಧಿವೇಶನ) ಎರಡನೇ ಭಾಗವನ್ನು ಬಜೆಟ್ ಬಜೆಟ್ ಅಧಿವೇಶನವನ್ನು ಮುಂದೂಡುವ ಮತ್ತು ‘ಸಚಿವ ಸಂಪುಟದ ನಿರ್ಧಾರದ ಪ್ರಕಾರ ಒಂದು ದಿನದ ಅಧಿವೇಶನ’ವನ್ನು ಕರೆಯುವ ಪ್ರಸ್ತಾವನೆಯನ್ನು ಮಂಡಿಸುವ ಬದಲು ಸಭೆ ನಡೆಸಲಾಯಿತುಎಂದು ಸಕ್ಸೇನಾ ತಮ್ಮ ಟಿಪ್ಪಣಿಯಲ್ಲಿ ಹೇಳಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಎಲ್ ಜಿ ಮತ್ತೊಮ್ಮೆ ಸಂವಿಧಾನವನ್ನು ಅಧ್ಯಯನ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ

ನಾಳೆ ಅಧಿವೇಶನ ನಡೆಯಲಿದೆ. ಎಲ್‌ಜಿ ಸಾಹಿಬ್ ಅವರು ಸಂವಿಧಾನವನ್ನು ಮತ್ತೊಮ್ಮೆ ಅಧ್ಯಯನ ಮಾಡಬೇಕೆಂದು ನಾನು ಬಯಸುತ್ತೇನೆ ಅಥವಾ ಕನಿಷ್ಠ ಸುಶಿಕ್ಷಿತ ಮತ್ತು ಅದರ ಬಗ್ಗೆ ಜ್ಞಾನವಿರುವ ಕೆಲವು ಸಲಹೆಗಾರರನ್ನು ಹೊಂದಿರಬೇಕು ಎಂದು ಭಾನುವಾರ ಸಿಬಿಐ ಕಚೇರಿಯಿಂದ ಹೊರಬಂದ ನಂತರ ಮುಖ್ಯಮಂತ್ರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 17 April 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್