AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್ ವಿರೋಧಿ ಹೇಳಿಕೆಗೆ ಕ್ಷಮೆ ಕೋರಿ ರಾಹುಲ್ ಗಾಂಧಿ ನಿವಾಸದ ಮುಂದೆ ಬಿಜೆಪಿ ಪ್ರತಿಭಟನೆ

ರಾಹುಲ್ ಗಾಂಧಿಯವರ ಸಿಖ್ ವಿರೋಧಿ ಟೀಕೆಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಿಖ್ ವಿರೋಧಿ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಿಖ್ ವಿರೋಧಿ ಹೇಳಿಕೆಗೆ ಕ್ಷಮೆ ಕೋರಿ ರಾಹುಲ್ ಗಾಂಧಿ ನಿವಾಸದ ಮುಂದೆ ಬಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಸುಷ್ಮಾ ಚಕ್ರೆ
|

Updated on: Sep 11, 2024 | 7:13 PM

Share

ನವದೆಹಲಿ: ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಖ್ ಸಮುದಾಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳನ್ನು ವಿರೋಧಿಸಿ ದೆಹಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿಖ್ ಸೆಲ್ ಸದಸ್ಯರು ರಾಹುಲ್ ಗಾಂಧಿ ಅವರ ನಿವಾಸದ ಮುಂದೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಸಿಖ್ ಸಮುದಾಯದ ಸದಸ್ಯರು, ಮಹಿಳೆಯರು ಸೇರಿದಂತೆ ಹಲವು ಜನ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ವಿಜ್ಞಾನ ಭವನದಿಂದ ಮೆರವಣಿಗೆ ಹೊರಟ ಅವರು ರಾಹುಲ್ ಗಾಂಧಿಯವರ ನಿವಾಸವನ್ನು ತಲುಪಲು ಪ್ರಯತ್ನಿಸಿದರು. ಆದರೆ, ಪೊಲೀಸರು ಅವರನ್ನು ತಡೆದರು. ಬಿಜೆಪಿ ನಾಯಕ ಆರ್‌ಪಿ ಸಿಂಗ್ ಅವರು “ರಾಹುಲ್ ಗಾಂಧಿ ಸಿಖ್ಖರ ಕ್ಷಮೆ ಯಾಚಿಸಬೇಕು. ಅವರು ಭಾರತದ ಮಾನಹಾನಿ ಮಾಡಲು ವಿದೇಶಿ ನೆಲವನ್ನು ಬಳಸಿದ್ದಾರೆ. ಸಿಖ್ಖರು ಪೇಟವನ್ನು ಧರಿಸಲು ಮತ್ತು ಗುರುದ್ವಾರಕ್ಕೆ ಹೋಗಲು ಅನುಮತಿಸುವುದಿಲ್ಲ ಎಂದು ಸಿಖ್ಖರ ಬಗ್ಗೆ ಹೇಳಿಕೆ ನೀಡಿದ್ದಾರೆ.” ಎಂದಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಸಿಖ್ಖರ ಬಗ್ಗೆ ಹೇಳಿದ್ದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ: ಬಿಜೆಪಿ ಮುಖಂಡನ ಸವಾಲು

ಈ ವೇಳೆ ಪ್ರತಿಭಟನಾಕಾರರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಸಿಖ್ಖರನ್ನು “ಅವಮಾನಿಸಿದ” ಆರೋಪಕ್ಕಾಗಿ ಕ್ಷಮೆ ಯಾಚಿಸಲು ಒತ್ತಾಯಿಸಿದರು. ದೇಶದಲ್ಲಿ 1984ರ ಸಿಖ್ ವಿರೋಧಿ ದಂಗೆಗಳಿಗೆ ಕಾಂಗ್ರೆಸ್ ಹೊಣೆಯಾಗಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಹೇಳಿದ್ದೇನು?:

ಸೋಮವಾರ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನೂರಾರು ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಕೆಲವು ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ್ದರು. ಭಾರತದಲ್ಲಿ ಕಾಂಗ್ರೆಸ್​ನ ಹೋರಾಟವು ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಸಿಖ್ಖರ ಬಗ್ಗೆ ಹೇಳಿದ್ದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ: ಬಿಜೆಪಿ ಮುಖಂಡನ ಸವಾಲು

ಆ ಕಾರ್ಯಕ್ರಮದ ಸಂದರ್ಭದಲ್ಲಿ ಮುಂದಿನ ಸಾಲಿನಲ್ಲಿದ್ದ ಸಿಖ್ ಸಮುದಾಯದವರಲ್ಲಿ ಒಬ್ಬರ ಹೆಸರನ್ನು ಕೇಳಿದ ರಾಹುಲ್ ಗಾಂಧಿ, ಪೇಟ ತೊಟ್ಟ ಅಣ್ಣ ನಿನ್ನ ಹೆಸರೇನು? ಎಂದು ಕೇಳಿದರು. “ಈ ಹೋರಾಟವು ಭಾರತದಲ್ಲಿ ಸಿಖ್‌ಗೆ ತನ್ನ ಪೇಟವನ್ನು ಧರಿಸಲು ಅವಕಾಶ ನೀಡಬೇಕೇ ಅಥವಾ ಭಾರತದಲ್ಲಿ ಕದವನ್ನು ಧರಿಸಲು ಅನುಮತಿಸುವುದೇ ಎಂಬುದಾಗಿದೆ. ಆಗ ಅವನು ಸಿಖ್ ಆಗಿ ಗುರುದ್ವಾರಕ್ಕೆ ಹೋಗಲು ಸಾಧ್ಯವಾಗುತ್ತದೆ. ಅದು ಹೋರಾಟದ ವಿಷಯವಾಗಿದೆ. ಅವರಿಗೆ ಮಾತ್ರವಲ್ಲ, ಎಲ್ಲಾ ಧರ್ಮಗಳಿಗೆ ಇದು ಹೋರಾಟದ ವಿಷಯವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ