AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?
ವ್ಯಕ್ತಿಯೋರ್ವನಿಗೆ ಆವಾಜ್​ ಹಾಕುತ್ತಿರುವ ದೃಶ್ಯ (ಚಿತ್ರಕೃಪೆ-ಇಂಡಿಯಾಟುಡೆ)
TV9 Web
| Edited By: |

Updated on:Jan 08, 2022 | 8:21 AM

Share

ಬಿಜೆಪಿ ಕಾರ್ಯಕರ್ತರು ಸೇರಿ ಯುವಕನಿಗೆ ಮನಬಂದಂತೆ ಥಳಿಸಿ, ತಮ್ಮ ಉಗುಳನ್ನು ನೆಕ್ಕುವಂತೆ ಪೀಡಿಸಿದ್ದಾರೆ. ಅಷ್ಟೇ ಅಲ್ಲ ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್​​ದ ಧನ್​ಬಾದ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅದೂ ಕೂಡ ಬಿಜೆಪಿ ಸಂಸದ ಪಿ.ಎನ್​.ಸಿಂಗ್​ ಮತ್ತು ಬಿಜೆಪಿ ಎಂಎಲ್​ಎ ರಾಜ್ ಸಿನ್ಹಾ ಸಮ್ಮುಖದಲ್ಲಿಯೇ ಆ ಯುವಕನಿಗೆ ಥಳಿಸಲಾಗಿದೆ ಎಂದೂ ವರದಿಯಾಗಿದೆ.  ಪಂಜಾಬ್​​ನಲ್ಲಿ  ಪ್ರಧಾನಿ ಮೋದಿ ಭದ್ರತೆ ಲೋಪವಾಗಿದ್ದನ್ನು ವಿರೋಧಿಸಿ ಧನ್​ಬಾದ್​ ಜಿಲ್ಲೆಯ ಗಾಂಧಿ ಚೌಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ಹಾದುಹೋದವನೊಬ್ಬ ಪ್ರಧಾನಿ ಮೋದಿ ಮತ್ತು ಬಿಜೆಪಿ ಜಾರ್ಖಂಡ್ ಮುಖ್ಯಸ್ಥ ದೀಪಕ್​ ಪ್ರಕಾಶ್​ ವಿರುದ್ಧ ಅಸಂಸದೀಯ, ಅವಹೇಳನಕಾರಿ ಮಾತುಗಳನ್ನಾಡಿದ್ದಾನೆ. ಇದೇ ಕಾರಣಕ್ಕೆ ಸಿಟ್ಟಾದ ಬಿಜೆಪಿ ಕಾರ್ಯಕರ್ತರು ಆತನನ್ನು ಥಳಿಸಿದ್ದಾನೆ ಎಂದು ಸ್ಥಳದಲ್ಲಿದ್ದ ಬಿಜೆಪಿ ನಾಯಕರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಬಿಜೆಪಿ ಕಾರ್ಯಕರ್ತರು ಥಳಿಸುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾಫಿಕ್​ ಪೊಲೀಸರು ಮೂಕ ಪ್ರೇಕ್ಷಕರಂತೆ ನೋಡುತ್ತ ನಿಂತಿದ್ದರು ಎಂದು ಹೇಳಲಾಗಿದ್ದು, ಆತನಿಗೆ ಹೊಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ನೋಡಿದ ಜಾರ್ಖಂಡ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಕೂಡ ಟ್ವೀಟ್ ಮಾಡಿದ್ದಾರೆ. ವಿಡಿಯೋವನ್ನು ಶೇರ್ ಮಾಡಿಕೊಂಡು, ಇಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೇ, ಧನ್​ಬಾದ್ ಜಿಲ್ಲಾಧಿಕಾರಿ, ಧನ್​ಬಾದ್ ಪೊಲೀಸ್ ಮತ್ತು ಜಾರ್ಖಂಡ ಪೊಲೀಸ್ ಟ್ವಿಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜನರು ಶಾಂತಿಯುತವಾಗಿ ಬದುಕುವ ಈ ಜಾರ್ಖಂಡ್ ರಾಜ್ಯದಲ್ಲಿ ದ್ವೇಷಕ್ಕೆ ಜಾಗವಿಲ್ಲ. ಅದರಲ್ಲೂ ಕೋಮು ಸೌಹಾರ್ದತೆ ಕದಡುವ ಯಾರೇ ಆದರೂ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ. ತಪ್ಪಿತಸ್ಥರಾದ ಯಾರನ್ನೂ ಬಿಡುವುದಿಲ್ಲ ಎಂದು ಎಸಿಪಿ ಮನೋಜ್​ ಸ್ವರ್ಗೀಯರಿ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಸಿಪಿ ಸಿಂಗ್​ ಕೂಡ ಪ್ರತಿಕ್ರಿಯೆ ನೀಡಿದ್ದು, ನಾವೂ ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಯುವಕನ ಮೇಲೆ ದೌರ್ಜನ್ಯ ಎಸಗಿದವರು ಬಿಜೆಪಿ ಕಾರ್ಯಕರ್ತರು ಹೌದೋ, ಅಲ್ಲವೋ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Petrol Rate: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

Published On - 7:52 am, Sat, 8 January 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!