AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?
ವ್ಯಕ್ತಿಯೋರ್ವನಿಗೆ ಆವಾಜ್​ ಹಾಕುತ್ತಿರುವ ದೃಶ್ಯ (ಚಿತ್ರಕೃಪೆ-ಇಂಡಿಯಾಟುಡೆ)
TV9 Web
| Edited By: |

Updated on:Jan 08, 2022 | 8:21 AM

Share

ಬಿಜೆಪಿ ಕಾರ್ಯಕರ್ತರು ಸೇರಿ ಯುವಕನಿಗೆ ಮನಬಂದಂತೆ ಥಳಿಸಿ, ತಮ್ಮ ಉಗುಳನ್ನು ನೆಕ್ಕುವಂತೆ ಪೀಡಿಸಿದ್ದಾರೆ. ಅಷ್ಟೇ ಅಲ್ಲ ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್​​ದ ಧನ್​ಬಾದ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅದೂ ಕೂಡ ಬಿಜೆಪಿ ಸಂಸದ ಪಿ.ಎನ್​.ಸಿಂಗ್​ ಮತ್ತು ಬಿಜೆಪಿ ಎಂಎಲ್​ಎ ರಾಜ್ ಸಿನ್ಹಾ ಸಮ್ಮುಖದಲ್ಲಿಯೇ ಆ ಯುವಕನಿಗೆ ಥಳಿಸಲಾಗಿದೆ ಎಂದೂ ವರದಿಯಾಗಿದೆ.  ಪಂಜಾಬ್​​ನಲ್ಲಿ  ಪ್ರಧಾನಿ ಮೋದಿ ಭದ್ರತೆ ಲೋಪವಾಗಿದ್ದನ್ನು ವಿರೋಧಿಸಿ ಧನ್​ಬಾದ್​ ಜಿಲ್ಲೆಯ ಗಾಂಧಿ ಚೌಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ಹಾದುಹೋದವನೊಬ್ಬ ಪ್ರಧಾನಿ ಮೋದಿ ಮತ್ತು ಬಿಜೆಪಿ ಜಾರ್ಖಂಡ್ ಮುಖ್ಯಸ್ಥ ದೀಪಕ್​ ಪ್ರಕಾಶ್​ ವಿರುದ್ಧ ಅಸಂಸದೀಯ, ಅವಹೇಳನಕಾರಿ ಮಾತುಗಳನ್ನಾಡಿದ್ದಾನೆ. ಇದೇ ಕಾರಣಕ್ಕೆ ಸಿಟ್ಟಾದ ಬಿಜೆಪಿ ಕಾರ್ಯಕರ್ತರು ಆತನನ್ನು ಥಳಿಸಿದ್ದಾನೆ ಎಂದು ಸ್ಥಳದಲ್ಲಿದ್ದ ಬಿಜೆಪಿ ನಾಯಕರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಬಿಜೆಪಿ ಕಾರ್ಯಕರ್ತರು ಥಳಿಸುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾಫಿಕ್​ ಪೊಲೀಸರು ಮೂಕ ಪ್ರೇಕ್ಷಕರಂತೆ ನೋಡುತ್ತ ನಿಂತಿದ್ದರು ಎಂದು ಹೇಳಲಾಗಿದ್ದು, ಆತನಿಗೆ ಹೊಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ನೋಡಿದ ಜಾರ್ಖಂಡ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಕೂಡ ಟ್ವೀಟ್ ಮಾಡಿದ್ದಾರೆ. ವಿಡಿಯೋವನ್ನು ಶೇರ್ ಮಾಡಿಕೊಂಡು, ಇಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೇ, ಧನ್​ಬಾದ್ ಜಿಲ್ಲಾಧಿಕಾರಿ, ಧನ್​ಬಾದ್ ಪೊಲೀಸ್ ಮತ್ತು ಜಾರ್ಖಂಡ ಪೊಲೀಸ್ ಟ್ವಿಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜನರು ಶಾಂತಿಯುತವಾಗಿ ಬದುಕುವ ಈ ಜಾರ್ಖಂಡ್ ರಾಜ್ಯದಲ್ಲಿ ದ್ವೇಷಕ್ಕೆ ಜಾಗವಿಲ್ಲ. ಅದರಲ್ಲೂ ಕೋಮು ಸೌಹಾರ್ದತೆ ಕದಡುವ ಯಾರೇ ಆದರೂ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ. ತಪ್ಪಿತಸ್ಥರಾದ ಯಾರನ್ನೂ ಬಿಡುವುದಿಲ್ಲ ಎಂದು ಎಸಿಪಿ ಮನೋಜ್​ ಸ್ವರ್ಗೀಯರಿ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಸಿಪಿ ಸಿಂಗ್​ ಕೂಡ ಪ್ರತಿಕ್ರಿಯೆ ನೀಡಿದ್ದು, ನಾವೂ ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಯುವಕನ ಮೇಲೆ ದೌರ್ಜನ್ಯ ಎಸಗಿದವರು ಬಿಜೆಪಿ ಕಾರ್ಯಕರ್ತರು ಹೌದೋ, ಅಲ್ಲವೋ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Petrol Rate: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

Published On - 7:52 am, Sat, 8 January 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?