AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?
ವ್ಯಕ್ತಿಯೋರ್ವನಿಗೆ ಆವಾಜ್​ ಹಾಕುತ್ತಿರುವ ದೃಶ್ಯ (ಚಿತ್ರಕೃಪೆ-ಇಂಡಿಯಾಟುಡೆ)
Follow us
TV9 Web
| Updated By: Lakshmi Hegde

Updated on:Jan 08, 2022 | 8:21 AM

ಬಿಜೆಪಿ ಕಾರ್ಯಕರ್ತರು ಸೇರಿ ಯುವಕನಿಗೆ ಮನಬಂದಂತೆ ಥಳಿಸಿ, ತಮ್ಮ ಉಗುಳನ್ನು ನೆಕ್ಕುವಂತೆ ಪೀಡಿಸಿದ್ದಾರೆ. ಅಷ್ಟೇ ಅಲ್ಲ ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್​​ದ ಧನ್​ಬಾದ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅದೂ ಕೂಡ ಬಿಜೆಪಿ ಸಂಸದ ಪಿ.ಎನ್​.ಸಿಂಗ್​ ಮತ್ತು ಬಿಜೆಪಿ ಎಂಎಲ್​ಎ ರಾಜ್ ಸಿನ್ಹಾ ಸಮ್ಮುಖದಲ್ಲಿಯೇ ಆ ಯುವಕನಿಗೆ ಥಳಿಸಲಾಗಿದೆ ಎಂದೂ ವರದಿಯಾಗಿದೆ.  ಪಂಜಾಬ್​​ನಲ್ಲಿ  ಪ್ರಧಾನಿ ಮೋದಿ ಭದ್ರತೆ ಲೋಪವಾಗಿದ್ದನ್ನು ವಿರೋಧಿಸಿ ಧನ್​ಬಾದ್​ ಜಿಲ್ಲೆಯ ಗಾಂಧಿ ಚೌಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ಹಾದುಹೋದವನೊಬ್ಬ ಪ್ರಧಾನಿ ಮೋದಿ ಮತ್ತು ಬಿಜೆಪಿ ಜಾರ್ಖಂಡ್ ಮುಖ್ಯಸ್ಥ ದೀಪಕ್​ ಪ್ರಕಾಶ್​ ವಿರುದ್ಧ ಅಸಂಸದೀಯ, ಅವಹೇಳನಕಾರಿ ಮಾತುಗಳನ್ನಾಡಿದ್ದಾನೆ. ಇದೇ ಕಾರಣಕ್ಕೆ ಸಿಟ್ಟಾದ ಬಿಜೆಪಿ ಕಾರ್ಯಕರ್ತರು ಆತನನ್ನು ಥಳಿಸಿದ್ದಾನೆ ಎಂದು ಸ್ಥಳದಲ್ಲಿದ್ದ ಬಿಜೆಪಿ ನಾಯಕರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಬಿಜೆಪಿ ಕಾರ್ಯಕರ್ತರು ಥಳಿಸುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾಫಿಕ್​ ಪೊಲೀಸರು ಮೂಕ ಪ್ರೇಕ್ಷಕರಂತೆ ನೋಡುತ್ತ ನಿಂತಿದ್ದರು ಎಂದು ಹೇಳಲಾಗಿದ್ದು, ಆತನಿಗೆ ಹೊಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ನೋಡಿದ ಜಾರ್ಖಂಡ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಕೂಡ ಟ್ವೀಟ್ ಮಾಡಿದ್ದಾರೆ. ವಿಡಿಯೋವನ್ನು ಶೇರ್ ಮಾಡಿಕೊಂಡು, ಇಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೇ, ಧನ್​ಬಾದ್ ಜಿಲ್ಲಾಧಿಕಾರಿ, ಧನ್​ಬಾದ್ ಪೊಲೀಸ್ ಮತ್ತು ಜಾರ್ಖಂಡ ಪೊಲೀಸ್ ಟ್ವಿಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜನರು ಶಾಂತಿಯುತವಾಗಿ ಬದುಕುವ ಈ ಜಾರ್ಖಂಡ್ ರಾಜ್ಯದಲ್ಲಿ ದ್ವೇಷಕ್ಕೆ ಜಾಗವಿಲ್ಲ. ಅದರಲ್ಲೂ ಕೋಮು ಸೌಹಾರ್ದತೆ ಕದಡುವ ಯಾರೇ ಆದರೂ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ. ತಪ್ಪಿತಸ್ಥರಾದ ಯಾರನ್ನೂ ಬಿಡುವುದಿಲ್ಲ ಎಂದು ಎಸಿಪಿ ಮನೋಜ್​ ಸ್ವರ್ಗೀಯರಿ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಸಿಪಿ ಸಿಂಗ್​ ಕೂಡ ಪ್ರತಿಕ್ರಿಯೆ ನೀಡಿದ್ದು, ನಾವೂ ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಯುವಕನ ಮೇಲೆ ದೌರ್ಜನ್ಯ ಎಸಗಿದವರು ಬಿಜೆಪಿ ಕಾರ್ಯಕರ್ತರು ಹೌದೋ, ಅಲ್ಲವೋ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Petrol Rate: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

Published On - 7:52 am, Sat, 8 January 22

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!