AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಜನರು ಕಾಂಗ್ರೆಸ್ ಅನ್ನು ಬೇರುಸಹಿತ ಕಿತ್ತೊಗೆದರು, ಬಿಜೆಪಿಗೂ ಅದೇ ಗತಿ ಬರಲಿದೆ: ಪ್ರಶಾಂತ್ ಕಿಶೋರ್

ನೀವು ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಅಥವಾ ಪಕ್ಷದ ಮುಖ್ಯಮಂತ್ರಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದಿದ್ದಾರೆ. ಅದೇ ವೇಳೆ ಬಿಹಾರವನ್ನು ನಡೆಸಲು ನಿತೀಶ್ ಕುಮಾರ್ ಸರಿಯಾದ ದೈಹಿಕ, ಮಾನಸಿಕ ಮತ್ತು ರಾಜಕೀಯ ಸ್ಥಿತಿಯಲ್ಲಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ

ಬಿಹಾರದ ಜನರು ಕಾಂಗ್ರೆಸ್ ಅನ್ನು ಬೇರುಸಹಿತ ಕಿತ್ತೊಗೆದರು, ಬಿಜೆಪಿಗೂ ಅದೇ ಗತಿ ಬರಲಿದೆ: ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
ರಶ್ಮಿ ಕಲ್ಲಕಟ್ಟ
|

Updated on: Oct 01, 2024 | 7:58 PM

Share

ದೆಹಲಿ ಅಕ್ಟೋಬರ್ 01: ಲಾಲು ಯಾದವ್ ಅವರನ್ನು ಬೆಂಬಲಿಸಲು ಕಾಂಗ್ರೆಸ್ ಎದುರಿಸಿದ ಅದೇ ಅನುಭವ ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿದ್ದಕ್ಕಾಗಿ ಬಿಜೆಪಿ (BJP) ಅನುಭವಿಸಲಿದೆ ಎಂದು ಚುನಾವಣಾ ತಂತ್ರಜ್ಞ, ರಾಜಕಾರಣಿ ಪ್ರಶಾಂತ್ ಕಿಶೋರ್ (Prashant Kishor) ಮಂಗಳವಾರ ಹೇಳಿದ್ದಾರೆ. ಅದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಅಥವಾ ದೈಹಿಕವಾಗಿ ಸದೃಢವಾಗಿಲ್ಲ ಎಂದು ಅವರು ಹೇಳಿದ್ದಾರೆ ಅವರ ರಾಜಕೀಯ ಪಕ್ಷವಾದ ಜನ್ ಸುರಾಜ್ ಪ್ರಾರಂಭವಾಗುವ ಒಂದು ದಿನದ ಮೊದಲು ಅವರು €ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಜನರು ಎರಡು ಪ್ರಮುಖ ಮೈತ್ರಿಗಳನ್ನು ಬದಿಗೊತ್ತಿ ತಮ್ಮ ಹೊಸ ರಾಜಕೀಯ ಪಕ್ಷಕ್ಕೆ ವಿಧಾನಸಭೆಯಲ್ಲಿ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ನೀವು ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಅಥವಾ ಪಕ್ಷದ ಮುಖ್ಯಮಂತ್ರಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದಿದ್ದಾರೆ. ಅದೇ ವೇಳೆ ಬಿಹಾರವನ್ನು ನಡೆಸಲು ನಿತೀಶ್ ಕುಮಾರ್ ಸರಿಯಾದ ದೈಹಿಕ, ಮಾನಸಿಕ ಮತ್ತು ರಾಜಕೀಯ ಸ್ಥಿತಿಯಲ್ಲಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿದ್ದಕ್ಕಾಗಿ ಬಿಹಾರದ ಜನತೆ ಬಿಜೆಪಿಯನ್ನು ಶಿಕ್ಷಿಸಲಿದ್ದಾರೆ ಎಂದರು. “ಲಾಲು ಪ್ರಸಾದ್ ಅವರಿಗೆ 15 ವರ್ಷಗಳ ಕಾಲ ಜಂಗಲ್ ರಾಜ್’ ನಡೆಸಲು ಕಾಂಗ್ರೆಸ್ ಸಹಾಯ ಮಾಡಿತು. ಬಿಹಾರದ ಜನರು ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆದರು. ಬಿಜೆಪಿಗೂ ಅದೇ ಗತಿ ಬರಲಿದೆ ಎಂದರು.

“ಅವರು ಚುಕ್ಕಾಣಿ ಹಿಡಿದರೆ ಅದರ ಮೈತ್ರಿ ಸೋಲುತ್ತದೆ ಎಂದು ತಿಳಿದಿದೆ, ಆದರೆ ಇದು ಬಿಜೆಪಿಯ ರಾಜಕೀಯ ಬಲವಂತವಾಗಿದೆ” ಎಂದು ಅವರು ಹೇಳಿದರು.

“ಬಿಹಾರಕ್ಕೆ ನಾಯಕತ್ವ ನೀಡಲು ನಿತೀಶ್ ಕುಮಾರ್ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆಯೇ ಎಂದು ಬಿಹಾರದ ದೊಡ್ಡ ವಿಭಾಗವು ಆಶ್ಚರ್ಯ ಪಡುತ್ತಿದೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಜೆಡಿಯು ನಾಯಕನ ವೃತ್ತಿಜೀವನ ಕೊನೆಗೊಳ್ಳುತ್ತಿದೆ. 2020 ರ ಚುನಾವಣೆಯಲ್ಲಿ ಜೆಡಿಯು ಕೇವಲ 42 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದಾಗ ಬಿಜೆಪಿ 74 ಸ್ಥಾನಗಳನ್ನು ಗೆದ್ದಾಗ ಬಿಹಾರದ ಜನರು ನಿತೀಶ್ ಕುಮಾರ್‌ಗೆ ಸಂದೇಶವನ್ನು ರವಾನಿಸಿದ್ದಾರೆ ಎಂದಿದ್ದಾರೆ ಪಿಕೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅದು ದೇಶಾದ್ಯಂತ ಇತರ ಪಕ್ಷಗಳನ್ನು ಮೋಸದಿಂದ ಒಡೆಯುತ್ತದೆ ಆದರೆ ಜೆಡಿ (ಯು) ಸಂಸದರ ಅಗತ್ಯತೆಯಿಂದಾಗಿ ವಿಧಾನಸಭೆಯಲ್ಲಿ ಹೆಚ್ಚಿನ ಸ್ಥಾನಗಳಿದ್ದರೂ ಬಿಹಾರದಲ್ಲಿ ಕುಮಾರ್ ಅವರನ್ನು ಹೇರಲು ಆಯ್ಕೆ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ: ನನ್ನ ತಂದೆಯಂತೆ ತತ್ವ, ಸಿದ್ಧಾಂತಕ್ಕಾಗಿ ಸಚಿವ ಸ್ಥಾನ ಬಿಟ್ಟುಕೊಡಲೂ ಸಿದ್ಧ; ಚಿರಾಗ್ ಪಾಸ್ವಾನ್ ಅಚ್ಚರಿಯ ಹೇಳಿಕೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಜನ್ ಸುರಾಜ್ ಪಕ್ಷ ಸಂಪೂರ್ಣ ಬಹುಮತ ಪಡೆಯಲಿದೆ ಎಂದ ಅವರು ಯಾವುದೇ ರಾಜಕೀಯ ಸಂಘಟನೆಗಳನ್ನು ಸೇರುವುದಿಲ್ಲ ಎಂದು ಭರವಸೆ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ