AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Sachin Pilot ಕೇಂದ್ರವು ಎಮ್‌ಎಸ್‌ಪಿಗೆ ಕಾನೂನುಬದ್ಧವಾಗಿ ಖಾತರಿಪಡಿಸುವುದು ಮಾತ್ರವಲ್ಲದೆ ಖರೀದಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವ ನಿಯಂತ್ರಣವನ್ನು ಒದಗಿಸಬೇಕು. ರೈತ ಸಮುದಾಯದ ಇಂತಹ ಸುದೀರ್ಘ ಆಂದೋಲನವನ್ನು ಭಾರತದ ಇತಿಹಾಸದಲ್ಲಿ ನೋಡಿಲ್ಲ ಎಂದು ಎಂದು ಸಚಿನ್ ಪೈಲಟ್ ಮಂಗಳವಾರ ಹೇಳಿದ್ದಾರೆ.

ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್
ಸಚಿನ್ ಪೈಲಟ್
TV9 Web
| Edited By: |

Updated on: Nov 23, 2021 | 3:45 PM

Share

ದೆಹಲಿ: ಇತ್ತೀಚಿನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (BJP) ಸೋಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಟ್ಟ ಪ್ರದರ್ಶನಕ್ಕೆ ಕಾರಣವಾಗಬಾರದೆಂದು ನರೇಂದ್ರ ಮೋದಿ (Narendra Modi) ಸರ್ಕಾರ ಮೂರು ಕೃಷಿ ಕಾನೂನುಗಳನ್ನು(Farm Laws) ರದ್ದುಗೊಳಿಸುವ ಘೋಷಣೆ ಮಾಡಲು ಕಾರಣವಾಯಿತು ಎಂದು ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ (Rajasthan) ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ (Sachin Pilot) ಮಂಗಳವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಪೈಲಟ್ ಕೇಂದ್ರದ ಮೇಲಿನ ರೈತರ ಅಪನಂಬಿಕೆ ಈ ನಿರ್ಧಾರದಿಂದ(ಕೃಷಿ ಕಾನೂನು ರದ್ದುಗೊಳಿಸುವ) ಹೋಗುವುದಿಲ್ಲವಾದ್ದರಿಂದ ಚುನಾವಣೆಯಲ್ಲಿ ಬಿಜೆಪಿಗೆ ಪರಿಣಾಮಗಳು ಉಂಟಾಗುತ್ತವೆ ಎಂದು ಹೇಳಿದರು. ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ನಂತರ, ರೈತ ಸಂಘಗಳು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತರಿಪಡಿಸುವ ಕಾನೂನು, ಗಾಳಿಯ ಗುಣಮಟ್ಟದ ಸುಗ್ರೀವಾಜ್ಞೆ, ವಿದ್ಯುತ್ ಬಿಲ್ 2020 ರ ಹಿಂಪಡೆಯುವವರೆಗೆ ತಮ್ಮ ಬಾಕಿ ಇರುವ ಬೇಡಿಕೆಗಳವರೆಗೆ ಆಂದೋಲನವನ್ನು ಮುಂದುವರಿಸುವುದಾಗಿ ಹೇಳಿವೆ.

ಕೇಂದ್ರವು ಎಮ್‌ಎಸ್‌ಪಿಗೆ ಕಾನೂನುಬದ್ಧವಾಗಿ ಖಾತರಿಪಡಿಸುವುದು ಮಾತ್ರವಲ್ಲದೆ ಖರೀದಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವ ನಿಯಂತ್ರಣವನ್ನು ಒದಗಿಸಬೇಕು. ರೈತ ಸಮುದಾಯದ ಇಂತಹ ಸುದೀರ್ಘ ಆಂದೋಲನವನ್ನು ಭಾರತದ ಇತಿಹಾಸದಲ್ಲಿ ನೋಡಿಲ್ಲ ಎಂದು ಎಂದು ಸಚಿನ್ ಪೈಲಟ್  ಹೇಳಿದ್ದಾರೆ.

“ಮೋದಿ ಅವರು (ಕಾನೂನು) ಹಿಂದೆಗೆದುಕೊಳ್ಳಬೇಕಾದರೆ, ಜೀವನ ಮತ್ತು ಜೀವನೋಪಾಯವನ್ನು ವ್ಯರ್ಥ ಮಾಡುವ ಅವಶ್ಯಕತೆ ಏನಿತ್ತು, ಎಷ್ಟು ಹಾನಿಯಾಯಿತು, ರೈತರನ್ನು ನಕ್ಸಲೀಯರು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು ಮತ್ತು ಕೆಲವು ಮಂತ್ರಿಗಳ ಸಂಬಂಧಿಕರು ಜನರ ಮೇಲೆ ವಾಹನವನ್ನು ಹರಿಸಿದ್ದರು ಎಂದು ಪೈಲಟ್ ಹೇಳಿದರು.

ಕೃಷಿ ಕಾನೂನುಗಳನ್ನು ಘೋಷಿಸುವ ಮೊದಲು ರೈತ ಗುಂಪುಗಳೊಂದಿಗೆ ಯಾವುದೇ ಚರ್ಚೆ ನಡೆಸಲಿಲ್ಲ ಎಂದು ಅವರು ಆರೋಪಿಸಿದರು. “ಸರ್ಕಾರ ಮತ್ತು ರೈತರ ನಡುವೆ “ವಿಶ್ವಾಸದ ವಿಘಟನೆ” ಕಂಡುಬಂದಿದೆ. ಇದು ಭವಿಷ್ಯದ ವಿತರಣೆಗಳಿಗೆ “ಹಾನಿಕಾರಕ” ಎಂದು ಪೈಲಟ್ ಹೇಳಿದ್ದಾರೆ.

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದು,ಬುಧವಾರ ಕೇಂದ್ರ ಸಚಿವ ಸಂಪುಟವು ಕಾನೂನುಗಳ ರದ್ದತಿ ಅನುಮೋದಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಈ ಭಾನುವಾರದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಕೃಷಿ ಕಾನೂನುಗಳ ಪರಿಣಾಮಗಳ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಲಿವೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್ ಟಿಎಂಸಿ ಸೇರುವ ಸಾಧ್ಯತೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ