AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ

ಈ ಬಗ್ಗೆ ಟ್ವೀಟ್ ಮಾಡಿದ ರಾಹುಲ್, ಆಂತರಿಕವಾಗಿ ವಿಭಜನೆಗೊಂಡರೆ, ಭಾರತವು ಬಾಹ್ಯವಾಗಿ ದುರ್ಬಲವಾಗುತ್ತದೆ. ಬಿಜೆಪಿಯ ನಾಚಿಕೆಗೇಡಿನ ಮತಾಂಧತೆಯು ನಮ್ಮನ್ನು ಪ್ರತ್ಯೇಕಿಸಿರುವುದು ಮಾತ್ರವಲ್ಲ, ಜಾಗತಿಕವಾಗಿ ಭಾರತದ ಸ್ಥಾನಮಾನವನ್ನು ಹಾಳು ಮಾಡಿದೆ ಎಂದಿದ್ದಾರೆ.

ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on:Jun 06, 2022 | 7:25 PM

Share

ದೆಹಲಿ: ಬಿಜೆಪಿಯಿಂದ (BJP) ಅಮಾನತುಗೊಂಡಿರುವ ಇಬ್ಬರು ವಕ್ತಾರರು ಇಸ್ಲಾಂ ಮತ್ತು ಪ್ರವಾದಿ (prophet muhammad) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ನಂತರ ಭಾರತವು ಗಲ್ಫ್ ದೇಶಗಳಿಂದ ರಾಜತಾಂತ್ರಿಕ ಆಕ್ರೋಶವನ್ನು ಎದುರಿಸುತ್ತಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೋಮವಾರ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತಾರೂಢ ಪಕ್ಷದ ಮತಾಂಧತೆಯು ಭಾರತವನ್ನು ಪ್ರತ್ಯೇಕವಾಗುವಂತೆ ಮಾಡಿದ್ದಂತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ರಾಹುಲ್, ಆಂತರಿಕವಾಗಿ ವಿಭಜನೆಗೊಂಡರೆ, ಭಾರತವು ಬಾಹ್ಯವಾಗಿ ದುರ್ಬಲವಾಗುತ್ತದೆ. ಬಿಜೆಪಿಯ ನಾಚಿಕೆಗೇಡಿನ ಮತಾಂಧತೆಯು ನಮ್ಮನ್ನು ಪ್ರತ್ಯೇಕಿಸಿರುವುದು ಮಾತ್ರವಲ್ಲ, ಜಾಗತಿಕವಾಗಿ ಭಾರತದ ಸ್ಥಾನಮಾನವನ್ನು ಹಾಳು ಮಾಡಿದೆ ಎಂದಿದ್ದಾರೆ. ಕತಾರ್, ಕುವೈತ್ ಮತ್ತು ಇರಾನ್ ತಮ್ಮ ದೇಶಗಳಿಗೆ ಭಾರತದ ರಾಯಭಾರಿಗಳನ್ನು ಕರೆಸಿದ್ದು, ಹಲವಾರು ರಾಷ್ಟ್ರಗಳ ನೆಟ್ಟಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ  ಕರೆ ನೀಡಿದ್ದಾರೆ.

ಭಾನುವಾರ, ಬಿಜೆಪಿ ತನ್ನ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ (Nupur Sharma )ಮತ್ತು ದೆಹಲಿಯ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ (Naveen Kumar Jindal) ಅವರನ್ನು ಅಮಾನತುಗೊಳಿಸಿದೆ. ಅದೇ ವೇಳೆ ಪಕ್ಷವು “ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ” ಮತ್ತು “ಯಾವುದೇ ಧರ್ಮದ ಅವಮಾನಗಳನ್ನು ಬಲವಾಗಿ ಖಂಡಿಸುತ್ತದೆ” ಎಂದು ಹೇಳಿಕೆಯನ್ನೂ ನೀಡಿದೆ.

ಇದನ್ನೂ ಓದಿ
Image
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು
Image
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ
Image
Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?
Image
ಪ್ರವಾದಿ ಮೊಹಮ್ಮದ್​ರ ಅವಹೇಳನ: ಇಸ್ಲಾಮಿಕ್ ದೇಶಗಳಿಂದ ಆಕ್ಷೇಪ, ಭಾರತದ ಉತ್ಪನ್ನ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಇದು ದೇಶದೊಳಗಿನ ಟೀಕೆಯಲ್ಲ, ಅಂತಾರಾಷ್ಟ್ರೀಯ ಹಿನ್ನಡೆಯೇ ಬಿಜೆಪಿಯನ್ನು ಇಬ್ಬರು ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಡಿದೆ ಎಂದಿದ್ದಾರೆ .

ನೂಪುರ್ ಶರ್ಮಾ ಮತ್ತು  ನವೀನ್ ಕುಮಾರ್ ಇಸ್ಲಾಮೋಫೋಬಿಯಾದ ಮೂಲ ಸೃಷ್ಟಿಕರ್ತರಲ್ಲ. ನೆನಪಿರಲಿ, ಅವರು ರಾಜನಿಗಿಂತ ಹೆಚ್ಚು ನಿಷ್ಠರಾಗಿರಲು ಪ್ರಯತ್ನಿಸುತ್ತಿದ್ದರು ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:45 pm, Mon, 6 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ