AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasvi Surya ರಾಜಸ್ಥಾನದ ಗಲಭೆ ಪೀಡಿತ ಕರೌಲಿಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ

Karauli Violence ತಾನು ಕರೌಲಿಗೆ ಭೇಟಿ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ಜನರು ಅಲ್ಲಿಗೆ ತಲುಪುವಂತೆ ಕರೆ ನೀಡಿದ್ದರು. ತಮ್ಮ ಜೊತೆಗಿರುವ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ತೇಜಸ್ವಿ ಸೂರ್ಯ ಅವರು ರಾಷ್ಟ್ರಕ್ಕಾಗಿ ಹೋರಾಡಲು ಸಿದ್ಧರಿದ್ದೀರಾ ಎಂದು ಕೇಳಿದಾಗ...

Tejasvi Surya ರಾಜಸ್ಥಾನದ ಗಲಭೆ ಪೀಡಿತ ಕರೌಲಿಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ
ತೇಜಸ್ವಿ ಸೂರ್ಯ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Apr 13, 2022 | 4:42 PM

Share

ದೆಹಲಿ: ಹಿಂಸಾಚಾರ ಪೀಡಿತ ಕರೌಲಿಗೆ (Karauli) ಭೇಟಿ ನೀಡಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ (Tejasvi Surya )ಮತ್ತು ಇತರ ಬಿಜೆಪಿ ನಾಯಕರನ್ನು ರಾಜಸ್ಥಾನ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ದೌಸಾ ಗಡಿಗೆ (Dausa border) ಆಗಮಿಸುತ್ತಿದ್ದಂತೆ  ಯುವ ಸಂಸದರ ಜತೆ ಬಿಜೆಪಿ ರಾಜಸ್ಥಾನದ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ಹಲವಾರು ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ತಾನು ಕರೌಲಿಗೆ ಭೇಟಿ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ಜನರು ಅಲ್ಲಿಗೆ ತಲುಪುವಂತೆ ಕರೆ ನೀಡಿದ್ದರು. ತಮ್ಮ ಜೊತೆಗಿರುವ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ತೇಜಸ್ವಿ ಸೂರ್ಯ ಅವರು ರಾಷ್ಟ್ರಕ್ಕಾಗಿ ಹೋರಾಡಲು ಸಿದ್ಧರಿದ್ದೀರಾ ಎಂದು ಕೇಳಿದಾಗ ಅವರೆಲ್ಲರೂ “ಹೌದು” ಎಂದು ಕೇಳಿದರು. ಏನೇ ಆದರೂ ನಾವು ಕರೌಲಿಗೆ ಹೋಗುತ್ತೇವೆ. ನಾವು ಶಾಂತಿಯುತವಾಗಿ ಹೋಗಲು ಪ್ರಯತ್ನಿಸುತ್ತೇವೆ. ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರೆ, ನಾವು ಸಾಮೂಹಿಕ ನ್ಯಾಯಾಲಯದ ಬಂಧನಕ್ಕೊಳಗಾಗುತ್ತೇವೆ” ಎಂದು ಅವರು ನೆರೆದಿದ್ದ ಪ್ರೇಕ್ಷಕರನ್ನು ಉದ್ದೇಶಿಸಿ ತೇಜಸ್ವಿ ಸೂರ್ಯ ಹೇಳಿದರು. ಗುಂಪು ಪ್ರವೇಶಿಸದಂತೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ. ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಭೇಟಿ ನೀಡುವುದನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಬಂಧಿಸಿದೆ. ನಾನು ಅಲ್ಲಿಗೆ ತಲುಪುದನ್ನು ತಡೆಯಲಾಗಲ್ಲ ಎಂದಿದ್ದಾರೆ ತೇಜಸ್ವಿ ಸೂರ್ಯ. ಬೆಂಬಲಿಗರು ಬ್ಯಾರಿಕೇಡ್ ದಾಟಲು ಪ್ರಯತ್ನಿಸುತ್ತಿರುವುದನ್ನು ಮತ್ತು ರಾಜಸ್ಥಾನ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು .

ಕರೌಲಿಯಲ್ಲಿ ಏಪ್ರಿಲ್ 2 ರಂದು ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದದೆ . ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಗಣಿಸಿ ಏಪ್ರಿಲ್ 12 ರವರೆಗೆ ಒಂದು ವಾರದವರೆಗೆ ಕರ್ಫ್ಯೂ ವಿಧಿಸಲಾಗಿದೆ.

ಯುಗಾದಿಯಂದು (ಹಿಂದೂ ಹೊಸ ವರ್ಷ) ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಸಾಗುತ್ತಿದ್ದ ಬೈಕ್ ರ್ಯಾಲಿಯಲ್ಲಿ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಶನಿವಾರ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಘಟನೆಗಳ ನಂತರ ಕರ್ಫ್ಯೂ ವಿಧಿಸಲಾಯಿತು. ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ, ರ್ಯಾಲಿಯಲ್ಲಿದ್ದವರು “ಪ್ರಚೋದನಕಾರಿ” ಘೋಷಣೆಗಳನ್ನು ಎತ್ತಿದರು, ಇದು ಕಲ್ಲುಗಳಿಂದ ಗುಂಪು ದಾಳಿಗೆ ಉತ್ತೇಜನ ನೀಡಿತು, 8 ಪೊಲೀಸರು ಸೇರಿದಂತೆ 11 ಮಂದಿ ಗಾಯಗೊಂಡರು. ಅಂಗಡಿಗಳು ಮತ್ತು ನಿವಾಸಗಳನ್ನು ಸುಟ್ಟುಹಾಕಲಾಯಿತು ಮತ್ತು ನಗರದಲ್ಲಿ ಒಂದು ವಾರಕ್ಕೂ ಹೆಚ್ಚು ಕಾಲ ಕರ್ಫ್ಯೂ ಇತ್ತು. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಸಂಘಟನೆಗಳು ರ್ಯಾಲಿಯನ್ನು ಸಂಘಟಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮು ಹಿಂಸಾಚಾರದ ನಂತರ ಪೊಲೀಸರು 46 ಜನರನ್ನು ಬಂಧಿಸಿ ವಿಚಾರಣೆಗಾಗಿ ಏಳು ಮಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಭರತ್‌ಪುರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ ಪ್ರಶಾನ್ ಕುಮಾರ್ ಖಮೇಸ್ರಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Viral Photo: ರಾಜಸ್ಥಾನ ಹಿಂಸಾಚಾರ; ಸುಡುವ ಕಟ್ಟಡದಿಂದ ಜೀವದ ಹಂಗು ತೊರೆದು ಮಗುವನ್ನು ಕಾಪಾಡಿದ ಪೊಲೀಸ್

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು