AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಟೀಕೆಗೆ ತಲೆ ಕೆಡಿಸದೆ ಮುಂದೆ ಸಾಗುವ ಪ್ರಧಾನಿ, ಮೋದಿ ಸರ್ಕಾರದ ಸಾಧನೆಯನ್ನು ತೋರಿಸುವ ವಿಡಿಯೊ ಟ್ವೀಟ್ ಮಾಡಿದ ಬಿಜೆಪಿ

'ಸ್ವಚ್ಛ ಭಾರತ್ ಮಿಷನ್', 'ಪ್ರಧಾನ ಮಂತ್ರಿ ಮುದ್ರಾ ಯೋಜನೆ', 'ಉಜ್ವಲ ಯೋಜನೆ', 'ಜನ್ ಧನ್ ಯೋಜನೆ', 'ಜೀವನ ಜ್ಯೋತಿ ಬಿಮಾ ಯೋಜನೆ', 'ಪಿಎಂ ಆವಾಸ್ ಯೋಜನೆ' ಮತ್ತು 'ಫಸಲ್ ಬಿಮಾ ಯೋಜನಾ’ ವನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ

ವಿಪಕ್ಷಗಳ ಟೀಕೆಗೆ ತಲೆ ಕೆಡಿಸದೆ ಮುಂದೆ ಸಾಗುವ ಪ್ರಧಾನಿ, ಮೋದಿ ಸರ್ಕಾರದ ಸಾಧನೆಯನ್ನು ತೋರಿಸುವ ವಿಡಿಯೊ ಟ್ವೀಟ್ ಮಾಡಿದ ಬಿಜೆಪಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Mar 14, 2023 | 9:29 PM

Share

ಬಿಜೆಪಿ (BJP) ಮಂಗಳವಾರ 2007 ರಿಂದ ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಯಾಣವನ್ನು ಚಿತ್ರಿಸುವ ಅನಿಮೇಟೆಡ್ ವಿಡಿಯೊವನ್ನು ಹಂಚಿಕೊಂಡಿದ್ದು ಅದರಲ್ಲಿ ಮೋದಿ (Modi) ಸರ್ಕಾರದ ಎಲ್ಲಾ ಪ್ರಮುಖ ಸಾಧನೆಗಳು ಮತ್ತು ವಿರೋಧ ಪಕ್ಷಗಳ ವಿಫಲ ದಾಳಿಗಳನ್ನು ತೋರಿಸಲಾಗಿದೆ. ಇದರಲ್ಲಿ ವಿಪಕ್ಷಗಳು ಮೋದಿಯನ್ನು ಮೌತ್ ಕಾ ಸೌದಾಗರ್ ಎಂದು ಟೀಕಿಸಿರುವುದು, ಚಾಯ್ ವಾಲಾ ಎಂದು ಲೇವಡಿ ಮಾಡಿರುವುದನ್ನು ತೋರಿಸಲಾಗಿದೆ.

ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಯ ಗುರಿಯನ್ನು ಹೊಂದಿರುವ ಮೋದಿ ಅಲ್ಲಿವರೆಗೆ ಹೇಗೆ ತಲುಪಿದರು ಎಂದು ವಿವರಿಸುವ ಅವರು ನಾಲ್ಕು ನಿಮಿಷಗಳ ಅವಧಿಯ ವಿಡಿಯೊ ಇದಾಗಿದೆ. ಅವರು ಪ್ರಧಾನಿ ಕುರ್ಚಿಯತ್ತ ಸಾಗುವ ಮೆಟ್ಟಿಲುಗಳ ಮೇಲೆ ನಡೆಯಲು ಪ್ರಾರಂಭಿಸಿದಾಗ, ಅವರನ್ನು ಸೋನಿಯಾ ಗಾಂಧಿ ಅವರು ‘ಮೌತ್ ಕಾ ಸೌದಾಗರ್’ ಎಂದು ಉಲ್ಲೇಖಿಸುತ್ತಾರೆ. ಎಲ್ಲಾ ದಾಳಿಗಳನ್ನು ವಿರೋಧಿಸಿ, ಮೋದಿ ಅವರು ತಮ್ಮ ನಡಿಗೆಯನ್ನು ಮುಂದುವರಿಸುವುದನ್ನು ಕಾಣಬಹುದು. ‘ಚಾಯ್‌ವಾಲಾ’ ಎಂದು ಕರೆದು ಅಮೆರಿಕ ವೀಸಾ ನಿಷೇಧಕ್ಕಾಗಿ ಲೇವಡಿ ಮಾಡಲಾಗುತ್ತಿದೆ. 2014 ರಲ್ಲಿ ಪ್ರಧಾನಿಯಾದ ನಂತರ, ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಮೋದಿಗೆ ‘ಯುಎಸ್‌ಗೆ ಆಹ್ವಾನ’ ನೀಡುವುದನ್ನು ಇದರಲ್ಲಿ ಚಿತ್ರಿಸಲಾಗಿದೆ.

‘ಸ್ವಚ್ಛ ಭಾರತ್ ಮಿಷನ್’, ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’, ‘ಉಜ್ವಲ ಯೋಜನೆ’, ‘ಜನ್ ಧನ್ ಯೋಜನೆ’, ‘ಜೀವನ ಜ್ಯೋತಿ ಬಿಮಾ ಯೋಜನೆ’, ‘ಪಿಎಂ ಆವಾಸ್ ಯೋಜನೆ’ ಮತ್ತು ‘ಫಸಲ್ ಬಿಮಾ ಯೋಜನಾ’ ವನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರಫೇಲ್ ಆರೋಪ ಮಾಡಿದ್ದು ಕೂಡಾ ಇದರಲ್ಲಿದೆ. ತನ್ನ ಎರಡನೇ ಅವಧಿಯ ಅಧಿಕಾರದ ಅವಧಿಯಲ್ಲಿ, ಯುಎಸ್ ನಿರ್ಮಿತ ಫೈಜರ್ ಮತ್ತು ಮಾಡರ್ನಾ ಲಸಿಕೆಗಳ ಮೇಲೆ ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಮೋದಿ ‘ಭಾರತೀಯ ಲಸಿಕೆ’ ಅನ್ನು ಆಯ್ಕೆ ಮಾಡುತ್ತಾರೆ.

ಇದನ್ನೂ ಓದಿ:ಅಶಿಸ್ತಿನ ವರ್ತನೆಗಾಗಿ 15 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದ ಉತ್ತರಾಖಂಡ ವಿಧಾನಸಭಾ ಸ್ಪೀಕರ್

ಕೊನೆಗೆ, ‘ಗೌತಮ್ ದಾಸ್’, ‘ಮೋದಿ ತೇರಿ ಖಬರ್ ಕೂದೇಗಿ’ ಮತ್ತು ‘ನೀಚ್’ ಸೇರಿದಂತೆ ಇತರ ದೂಷಣೆಗಳಿಂದ ಪ್ರಭಾವಿತವಾಗದೆ, ಅವರು ‘5 ಟ್ರಿಲಿಯನ್ ಡಾಲರ್ ಆರ್ಥಿಕತೆ’ ಗುರಿಯತ್ತ ಸಾಗುತ್ತಿರುವುದನ್ನು ತೋರಿಸಿ ವಿಡಿಯೊ ಮುಕ್ತಾಯಗೊಳ್ಳುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Tue, 14 March 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ