AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್ ಟಿಕಾಯತ್ ಭಯೋತ್ಪಾದಕ, ಕೃಷಿ ಕಾನೂನು ಹಿಂಪಡೆದಿರುವುದು ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗಲಿದೆ: ಬಿಜೆಪಿ ಮುಖಂಡ

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ದೊಡ್ಡ ನಷ್ಟ ಮತ್ತು ಬೆರಳೆಣಿಕೆಯಷ್ಟು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗಿದೆ ಎಂದು ಅವರು ಆರೋಪಿಸಿದರು. “ಸರ್ಕಾರದ ಹೊಂದಿಕೊಳ್ಳುವ ನಿಲುವಿನಿಂದ ರೈತ ಮುಖಂಡರು ಅನಗತ್ಯ ಲಾಭ ಪಡೆದರು. ಪ್ರತಿಭಟನಾಕಾರರು ರೈತರಲ್ಲ, ”ಎಂದು ಹರಿನಾರಾಯಣ್ ರಾಜ್‌ಭರ್ ಹೇಳಿದರು.

ರಾಕೇಶ್ ಟಿಕಾಯತ್ ಭಯೋತ್ಪಾದಕ, ಕೃಷಿ ಕಾನೂನು ಹಿಂಪಡೆದಿರುವುದು ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗಲಿದೆ: ಬಿಜೆಪಿ ಮುಖಂಡ
ಹರಿನಾರಾಯಣ್ ರಾಜ್‌ಭರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 05, 2021 | 10:53 PM

Share

ಬಲಿಯಾ : ಬಿಕೆಯು (BKU) ನಾಯಕ ರಾಕೇಶ್ ಟಿಕಾಯತ್ (Rakesh Tikait) “ಭಯೋತ್ಪಾದಕ”.ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ನಷ್ಟ ಮತ್ತು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗುತ್ತದೆ ಎಂದು ಬಿಜೆಪಿ (BJP) ನಾಯಕ ಹರಿನಾರಾಯಣ್ ರಾಜ್‌ಭರ್ (Harinarayan Rajbhar) ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ  ವಿಡಿಯೊವೊಂದರಲ್ಲಿ ಮಾಜಿ ಘೋಸಿ ಲೋಕಸಭಾ ಸಂಸದ ಹರಿನಾರಾಯಣ್ ರಾಜ್‌ಭರ್, ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ “ಮಾಫಿಯಾ ಮುಖ್ತಾರ್ ಅನ್ಸಾರಿಯ ಶೂಟರ್” ಆಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  ಕೃಷಿ ಕಾನೂನುಗಳ ವಿರುದ್ಧದ ಆಂದೋಲನದ ಸಂದರ್ಭದಲ್ಲಿ 700 ರೈತರ ಸಾವಿಗೆ ಟಿಕಾಯತ್ ಹೊಣೆಗಾರ ಎಂದು ಆರೋಪಿಸಿದ ರಾಜ್‌ಭರ್, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು, ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಲು ಅವರ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ಹೋರಾಟದ ವೇಳೆ 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಸಂಘದ ಮುಖಂಡರು ಹೇಳಿದ್ದಾರೆ. ಟಿಕಾಯತ್ ಸೇರಿದಂತೆ ಪ್ರತಿಭಟನಾ ನಿರತ ರೈತ ಮುಖಂಡರು ಉಗ್ರವಾದಿಗಳು (ಭಯೋತ್ಪಾದಕರು) ಎಂದು ರಾಜ್‌ಭರ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 700 ರೈತರ ಸಾವಿಗೆ ರಾಕೇಶ್ ಟಿಕಾಯತ್ ಕಾರಣರಾಗಿದ್ದಾರೆ. ಟಿಕಾಯತ್ ವಿರುದ್ಧ ಪ್ರಕರಣ ದಾಖಲಿಸಿ ಆತನ ಆಸ್ತಿಯನ್ನು ವಶಪಡಿಸಿಕೊಂಡು ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ರಾಜ್‌ಭರ್ ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ದೊಡ್ಡ ನಷ್ಟ ಮತ್ತು ಬೆರಳೆಣಿಕೆಯಷ್ಟು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗಿದೆ ಎಂದು ಅವರು ಆರೋಪಿಸಿದರು. “ಸರ್ಕಾರದ ಹೊಂದಿಕೊಳ್ಳುವ ನಿಲುವಿನಿಂದ ರೈತ ಮುಖಂಡರು ಅನಗತ್ಯ ಲಾಭ ಪಡೆದರು. ಪ್ರತಿಭಟನಾಕಾರರು ರೈತರಲ್ಲ, ”ಎಂದು ಅವರು ಹೇಳಿದರು.

ಹರಿನಾರಾಯಣ್ ರಾಜ್‌ಭರ್ ಅವರು ಎಸ್‌ಬಿಎಸ್‌ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜಕೀಯಕ್ಕೆ ಸೇರುವ ಮೊದಲು ವಿರೋಧ ಪಕ್ಷದ ನಾಯಕ “ಮಾಫಿಯಾ ಮುಕ್ತಾರ್ ಅನ್ಸಾರಿಯ ಶೂಟರ್” ಆಗಿದ್ದರು. ಅವರು ತಮ್ಮ ತಮ್ಮ ಕ್ರಿಮಿನಲ್ ಭೂತಕಾಲವನ್ನು ಮರೆಮಾಚಲು ರಾಜಕಾರಣಿಯ ಪೋಷಾಕನ್ನು ಧರಿಸಿದ್ದದ್ದರು ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಸ್‌ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಅರುಣ್ ರಾಜ್‌ಭರ್, ಇದು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಎದುರಿಸಲಿರುವ ಸಂಭವನೀಯ ಸೋಲಿನ ಪ್ರತಿಬಿಂಬವಾಗಿದೆ. ಹೇಳಿಕೆ ನೀಡಿದ ನಾಯಕ ತನ್ನ ಆರೋಪ ಸಾಬೀತುಪಡಿಸಲು ದಾಖಲೆಯನ್ನು ತೋರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಭಾರತ ಡ್ರೋನ್ ನಿಗ್ರಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಸೇನಾಪಡೆಗೆ ಶೀಘ್ರದಲ್ಲೇ ಲಭ್ಯವಾಗಲಿದೆ: ಅಮಿತ್ ಶಾ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ