AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್ ಟಿಕಾಯತ್ ಭಯೋತ್ಪಾದಕ, ಕೃಷಿ ಕಾನೂನು ಹಿಂಪಡೆದಿರುವುದು ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗಲಿದೆ: ಬಿಜೆಪಿ ಮುಖಂಡ

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ದೊಡ್ಡ ನಷ್ಟ ಮತ್ತು ಬೆರಳೆಣಿಕೆಯಷ್ಟು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗಿದೆ ಎಂದು ಅವರು ಆರೋಪಿಸಿದರು. “ಸರ್ಕಾರದ ಹೊಂದಿಕೊಳ್ಳುವ ನಿಲುವಿನಿಂದ ರೈತ ಮುಖಂಡರು ಅನಗತ್ಯ ಲಾಭ ಪಡೆದರು. ಪ್ರತಿಭಟನಾಕಾರರು ರೈತರಲ್ಲ, ”ಎಂದು ಹರಿನಾರಾಯಣ್ ರಾಜ್‌ಭರ್ ಹೇಳಿದರು.

ರಾಕೇಶ್ ಟಿಕಾಯತ್ ಭಯೋತ್ಪಾದಕ, ಕೃಷಿ ಕಾನೂನು ಹಿಂಪಡೆದಿರುವುದು ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗಲಿದೆ: ಬಿಜೆಪಿ ಮುಖಂಡ
ಹರಿನಾರಾಯಣ್ ರಾಜ್‌ಭರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 05, 2021 | 10:53 PM

Share

ಬಲಿಯಾ : ಬಿಕೆಯು (BKU) ನಾಯಕ ರಾಕೇಶ್ ಟಿಕಾಯತ್ (Rakesh Tikait) “ಭಯೋತ್ಪಾದಕ”.ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ನಷ್ಟ ಮತ್ತು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗುತ್ತದೆ ಎಂದು ಬಿಜೆಪಿ (BJP) ನಾಯಕ ಹರಿನಾರಾಯಣ್ ರಾಜ್‌ಭರ್ (Harinarayan Rajbhar) ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ  ವಿಡಿಯೊವೊಂದರಲ್ಲಿ ಮಾಜಿ ಘೋಸಿ ಲೋಕಸಭಾ ಸಂಸದ ಹರಿನಾರಾಯಣ್ ರಾಜ್‌ಭರ್, ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ “ಮಾಫಿಯಾ ಮುಖ್ತಾರ್ ಅನ್ಸಾರಿಯ ಶೂಟರ್” ಆಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  ಕೃಷಿ ಕಾನೂನುಗಳ ವಿರುದ್ಧದ ಆಂದೋಲನದ ಸಂದರ್ಭದಲ್ಲಿ 700 ರೈತರ ಸಾವಿಗೆ ಟಿಕಾಯತ್ ಹೊಣೆಗಾರ ಎಂದು ಆರೋಪಿಸಿದ ರಾಜ್‌ಭರ್, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು, ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಲು ಅವರ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ಹೋರಾಟದ ವೇಳೆ 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಸಂಘದ ಮುಖಂಡರು ಹೇಳಿದ್ದಾರೆ. ಟಿಕಾಯತ್ ಸೇರಿದಂತೆ ಪ್ರತಿಭಟನಾ ನಿರತ ರೈತ ಮುಖಂಡರು ಉಗ್ರವಾದಿಗಳು (ಭಯೋತ್ಪಾದಕರು) ಎಂದು ರಾಜ್‌ಭರ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 700 ರೈತರ ಸಾವಿಗೆ ರಾಕೇಶ್ ಟಿಕಾಯತ್ ಕಾರಣರಾಗಿದ್ದಾರೆ. ಟಿಕಾಯತ್ ವಿರುದ್ಧ ಪ್ರಕರಣ ದಾಖಲಿಸಿ ಆತನ ಆಸ್ತಿಯನ್ನು ವಶಪಡಿಸಿಕೊಂಡು ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ರಾಜ್‌ಭರ್ ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ದೊಡ್ಡ ನಷ್ಟ ಮತ್ತು ಬೆರಳೆಣಿಕೆಯಷ್ಟು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗಿದೆ ಎಂದು ಅವರು ಆರೋಪಿಸಿದರು. “ಸರ್ಕಾರದ ಹೊಂದಿಕೊಳ್ಳುವ ನಿಲುವಿನಿಂದ ರೈತ ಮುಖಂಡರು ಅನಗತ್ಯ ಲಾಭ ಪಡೆದರು. ಪ್ರತಿಭಟನಾಕಾರರು ರೈತರಲ್ಲ, ”ಎಂದು ಅವರು ಹೇಳಿದರು.

ಹರಿನಾರಾಯಣ್ ರಾಜ್‌ಭರ್ ಅವರು ಎಸ್‌ಬಿಎಸ್‌ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜಕೀಯಕ್ಕೆ ಸೇರುವ ಮೊದಲು ವಿರೋಧ ಪಕ್ಷದ ನಾಯಕ “ಮಾಫಿಯಾ ಮುಕ್ತಾರ್ ಅನ್ಸಾರಿಯ ಶೂಟರ್” ಆಗಿದ್ದರು. ಅವರು ತಮ್ಮ ತಮ್ಮ ಕ್ರಿಮಿನಲ್ ಭೂತಕಾಲವನ್ನು ಮರೆಮಾಚಲು ರಾಜಕಾರಣಿಯ ಪೋಷಾಕನ್ನು ಧರಿಸಿದ್ದದ್ದರು ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಸ್‌ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಅರುಣ್ ರಾಜ್‌ಭರ್, ಇದು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಎದುರಿಸಲಿರುವ ಸಂಭವನೀಯ ಸೋಲಿನ ಪ್ರತಿಬಿಂಬವಾಗಿದೆ. ಹೇಳಿಕೆ ನೀಡಿದ ನಾಯಕ ತನ್ನ ಆರೋಪ ಸಾಬೀತುಪಡಿಸಲು ದಾಖಲೆಯನ್ನು ತೋರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಭಾರತ ಡ್ರೋನ್ ನಿಗ್ರಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಸೇನಾಪಡೆಗೆ ಶೀಘ್ರದಲ್ಲೇ ಲಭ್ಯವಾಗಲಿದೆ: ಅಮಿತ್ ಶಾ

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ