AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ರೈತರ ಆಂದೋಲನ, ರೈತರ ಆಂದೋಲನವಾಗಿಯೇ ಉಳಿಯುತ್ತದೆ: ಮತ್ತೆ ಗುಡುಗಿದ ರಾಕೇಶ್ ಟಿಕಾಯತ್

ಕೆಂಪು ಕೋಟೆಯಲ್ಲಿ ಹಿಂಸಾಚಾರ ಮತ್ತು ಧ್ವಜ ಹಾರಿಸಿದ್ದು ತಪ್ಪು. ಹಿಂಸಾಚಾರದಲ್ಲಿ ಭಾಗಿಯಾದವರು ತಮ್ಮ ಕಾರ್ಯಗಳಿಗೆ ದಂಡ ತೆರಲೆಬೇಕು ಎಂದು ಟಿಕಾಯತ್ ಮಾತನಾಡಿದ್ದಾರೆ.

ಇದು ರೈತರ ಆಂದೋಲನ, ರೈತರ ಆಂದೋಲನವಾಗಿಯೇ ಉಳಿಯುತ್ತದೆ: ಮತ್ತೆ ಗುಡುಗಿದ ರಾಕೇಶ್ ಟಿಕಾಯತ್
ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 8:36 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಟ್ರಾಕ್ಟರ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ಭಾರತೀಯ ಕಿಸಾನ್ ಯೂನಿಯನ್(BKU) ನಾಯಕ ರಾಕೇಶ್ ಟಿಕಾಯತ್ ಪ್ರತಿಕ್ರಿಯೆ ನೀಡಿದ್ದಾರೆ. ಟ್ರಾಕ್ಟರ್ ಚಳುವಳಿಯಲ್ಲಿ ಅನಕ್ಷರಸ್ಥರು ಟ್ರಾಕ್ಟರ್​ಗಳನ್ನು ಓಡಿಸಿದ್ದರು. ಅವರಿಗೆ ರೂಪಿಸಿಕೊಂಡಿದ್ದ ಮಾರ್ಗಗಳು ಗೊತ್ತಿರಲಿಲ್ಲ. ಪೊಲೀಸರು ದೆಹಲಿ ಕಡೆಗೆ ಹೋಗುವ ಮಾರ್ಗ ತಿಳಿಸಿದ್ದರು. ಹೀಗಾಗಿ ರೈತರು ದೆಹಲಿಗೆ ಹೋಗಿ ಮನೆಗೆ ವಾಪಸಾಗಿದ್ದಾರೆ ಎಂದು ಹೇಳಿದ್ದಾರೆ.

ಕೆಲ ರೈತರು ತಿಳಿಯದೆ ಕೆಂಪುಕೋಟೆ ಕಡೆ ಹೋಗಿದ್ದಾರೆ. ಆದರೆ, ಕೆಂಪು ಕೋಟೆಯಲ್ಲಿ ಹಿಂಸಾಚಾರ ಮತ್ತು ಧ್ವಜ ಹಾರಿಸಿದ್ದು ತಪ್ಪು. ಹಿಂಸಾಚಾರದಲ್ಲಿ ಭಾಗಿಯಾದವರು ತಮ್ಮ ಕಾರ್ಯಗಳಿಗೆ ದಂಡ ತೆರಲೆಬೇಕು ಎಂದು ಟಿಕಾಯತ್ ಮಾತನಾಡಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ನಿರ್ದಿಷ್ಟ ಸಮುದಾಯದ ವಿರುದ್ಧ ಪಿತೂರಿ ನಡೆಯುತ್ತಿದೆ. ಕಳೆದ 2 ತಿಂಗಳಿಂದ ಪಿತೂರಿ ನಡೆಯುತ್ತಿದೆ ಎಂದೂ ಚಳುವಳಿ ಹಾದಿ ತಪ್ಪಿದ ಬಗ್ಗೆ ಅವರು ಆರೋಪ ಮಾಡಿದ್ದಾರೆ.

ಇದು ಸಿಖ್ಖರ ಚಳುವಳಿಯಲ್ಲ, ರೈತರ ಚಳುವಳಿ ಕೆಂಪುಕೋಟೆ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಬಗ್ಗೆ ಕೂಡ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ. ಕೆಂಪುಕೋಟೆ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ್ದು ತಪ್ಪು. ಬ್ಯಾರಿಕೇಡ್ ಮುರಿದವರು ಚಳವಳಿಯಲ್ಲಿ ಭಾಗಿಯಾಗಲ್ಲ. ಅವರು ತಾವು ಮಾಡಿದ ತಪ್ಪಿಗೆ ದಂಡ ತೆರಲೇಬೇಕು ಎಂದು ತಿಳಿಸಿದ್ದಾರೆ. ಜೊತೆಗೆ, ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದ ದೀಪ್ ಸಿಧು ಸಿಖ್ ಅಲ್ಲ. ಆತ ಬಿಜೆಪಿಯ ಕಾರ್ಯಕರ್ತ ಎಂದು ಟಿಕಾಯತ್ ಹೇಳಿದ್ದಾರೆ. ದೀಪ್ ಸಿಧು ಪ್ರಧಾನಿ ಮೋದಿ ಜತೆ ಇರುವ ಭಾವಚಿತ್ರವಿದೆ. ಇದು ಕೇವಲ ರೈತರ ಆಂದೋಲನ, ರೈತರ ಆಂದೋಲನವಾಗಿಯೇ ಉಳಿಯುತ್ತದೆ ಎಂದು ಟಿಕಾಯತ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಟ್ರ್ಯಾಕ್ಟರ್ ಚಳುವಳಿ ವೇಳೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ, ರೈತ ಸಂಘಟನೆಗಳ ಐವರು ಮುಖಂಡರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರೈತ ಸಂಘಟನೆಗಳ ಮುಖಂಡರಾದ ಡಾ.ದರ್ಶನ್​ ಪಾಲ್, ರಾಕೇಶ್ ಟಿಕಾಯತ್, ಜೋಗಿಂದರ್, ಬೂಟಾ ಸಿಂಗ್ ಹಾಗೂ ರಾಜೇಂದ್ರ ಸಿಂಗ್ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

Published On - 6:21 pm, Wed, 27 January 21

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ