AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡ; ಶುರುವಾಗಿದೆ ಮತ್ತೊಂದು ಆತಂಕ

Black Fungus: ಬ್ಲ್ಯಾಕ್​ ಫಂಗಸ್​ ದಿನೇದಿನೆ ಮಾರಕವಾಗಿ ಪರಿಣಮಿಸುತ್ತಿದೆ. ದೇಶಾದ್ಯಂತ ಇಲ್ಲಿಯವರೆಗೆ ಈ ಕಾಯಿಲೆಯಿಂದ 219 ಮಂದಿ ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆಯ ಡಾಟಾದಲ್ಲಿ ಉಲ್ಲೇಖವಾಗಿದೆ.

ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡ; ಶುರುವಾಗಿದೆ ಮತ್ತೊಂದು ಆತಂಕ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 22, 2021 | 8:07 PM

Share

ಮ್ಯೂಕೋರ್ಮೈಕೋಸಿಸ್​ (ಬ್ಲ್ಯಾಕ್ ಫಂಗಸ್​) ಸೋಂಕು ಪ್ರತಿದಿನ ಹೊಸಹೊಸ ಸ್ವರೂಪದಲ್ಲಿ ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೆಹಲಿಯ ಸರ್​ ಗಂಗಾ ರಾಮ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳಿಗೆ ಸಣ್ಣಕರುಳಿನಲ್ಲಿ ಬ್ಲ್ಯಾಕ್​ ಫಂಗಸ್​ (ಕಪ್ಪುಶಿಲೀಂದ್ರ) ಪತ್ತೆಯಾಗಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ. ಹಾಗೇ ಇದು ಅತಿವಿರಳ ಪ್ರಕರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬ್ಲ್ಯಾಕ್​ ಫಂಗಸ್​ ದಿನೇದಿನೆ ಮಾರಕವಾಗಿ ಪರಿಣಮಿಸುತ್ತಿದೆ. ದೇಶಾದ್ಯಂತ ಇಲ್ಲಿಯವರೆಗೆ ಈ ಕಾಯಿಲೆಯಿಂದ 219 ಮಂದಿ ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆಯ ಡಾಟಾದಲ್ಲಿ ಉಲ್ಲೇಖವಾಗಿದೆ. ಇಂದು ಹೇಳಿಕೆ ಬಿಡುಗಡೆ ಮಾಡಿರುವ ಸರ್ ಗಂಗಾರಾಮ್ ಆಸ್ಪತ್ರೆ, ನಮ್ಮಲ್ಲಿ ದಾಖಲಾಗಿರುವ ಇಬ್ಬರು ಕೊವಿಡ್​ 19 ಸೋಂಕಿತರ ಸಣ್ಣ ಕರುಳಲ್ಲಿ ಕಪ್ಪು ಶಿಲೀಂದ್ರ ಪತ್ತೆಯಾಗಿದೆ ಎಂದು ಹೇಳಿದೆ. ಇಲ್ಲಿಯವರೆಗೆ ಬ್ಲ್ಯಾಕ್ ಫಂಗಸ್​ ಸೋಂಕು ಸಾಮಾನ್ಯವಾಗಿ ಕೊವಿಡ್ 19 ಕಾಯಿಲೆಯಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಶ್ವಾಸಕೋಶದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಸಣ್ಣಕರುಳಲ್ಲಿ ಪತ್ತೆಯಾಗುವ ಮೂಲಕ ಅಪರೂಪದ ಪ್ರಕರಣ ಎನಿಸಿಕೊಂಡಿದೆ.

ಈ ಇಬ್ಬರೂ ಮಧುಮೇಹಿಗಳಾಗಿದ್ದು ಕೊವಿಡ್​ 19ನಿಂದ ಚೇತರಿಸಿಕೊಳ್ಳುತ್ತಿದ್ದರು. ಸಿಟಿ ಸ್ಕ್ಯಾನ್ ಮಾಡಿದಾಗ ಬ್ಲ್ಯಾಕ್ ಫಂಗಸ್​ ಇರುವುದು ಗೊತ್ತಾಯಿತು. ಸಣ್ಣ ಕರುಳಲ್ಲಿ ಕಪ್ಪು ಶಿಲೀಂದ್ರ ಇರುವುದನ್ನು ನೋಡಿ ಅನುಮಾನಗೊಂಡು ಬಯಾಪ್ಸಿ ಮಾಡಲಾಯಿತು. ಬಯಾಪ್ಸಿ ವರದಿಯಿಂದ ಬ್ಲ್ಯಾಕ್​ ಫಂಗಸ್​ ಇರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ತಿಳಿಸಿದೆ. ಹಾಗೇ, ಇವರಿಬ್ಬರಲ್ಲಿ ಒಬ್ಬರಿಗೆ ಮಾತ್ರ ಚಿಕಿತ್ಸೆಯ ವೇಳೆ ಸ್ಟೀರಾಯ್ಡ್​ ಕೊಡಲಾಗಿತ್ತು. ಮತ್ತೊಬ್ಬರಿಗೆ ಚಿಕಿತ್ಸೆಯಲ್ಲಿ ಸ್ಟೀರಾಯ್ಡ್ ಬಳಕೆ ಮಾಡಲಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಸಣ್ಣಕರುಳಿನಲ್ಲಿ ಮ್ಯೂಕೋರ್ಮೈಕೋಸಿಸ್​ ಪತ್ತೆಯಾದ ಇಬ್ಬರು ರೋಗಿಗಳಲ್ಲಿ ಒಬ್ಬರಿಗೆ 56 ವರ್ಷವಾಗಿದೆ. ಇವರ ಕುಟುಂಬದ ಮೂವರು ಕೊವಿಡ್​ 19 ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ಇವರಿಗೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆದರೆ ಆ್ಯಸಿಡಿಟಿ ಎಂದು ಮನೆಯಲ್ಲೇ ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಕಡಿಮೆಯಾಗದೆ ಇದ್ದಾಗ ಮತ್ತೆ ಬಂದು ದಾಖಲಾದರು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಹಾಗೇ ಇವರಿಗೆ ತತ್​ಕ್ಷಣವೇ ಆ್ಯಂಟಿ-ಫಂಗಲ್​ ಚಿಕಿತ್ಸೆ ಶುರು ಮಾಡಿದ್ದೇವೆ ಎಂದೂ ಹೇಳಿದ್ದಾರೆ. ಹಾಗೇ ಇನ್ನೊಬ್ಬ ರೋಗಿಯ ವಯಸ್ಸು 68 ವರ್ಷ. ಇವರಿಗೆ ಕೊವಿಡ್​ 19 ಸೋಂಕಿಗೆ ಚಿಕಿತ್ಸೆ ನೀಡುವಾಗ ಸ್ಟೀರಾಯ್ಡ್ ಬಳಕೆ ಮಾಡಲಾಗಿತ್ತು. ಇವರೂ ಸಹ ಸೋಂಕಿನಿಂದ ಮುಕ್ತರಾದ ಬಳಿಕ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸಿಟಿ ಸ್ಕ್ಯಾನ್ ಮಾಡಿದಾಗ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Ashden Award: ಅಂತಿಮ ಪಟ್ಟಿಯಲ್ಲಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್

ಬ್ಲ್ಯಾಕ್​ಫಂಗಸ್ ರೋಗಕ್ಕೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲು ಸೋನಿಯಾ ಗಾಂಧಿ ಸಲಹೆ; ಪ್ರಧಾನಿ ಮೋದಿಗೆ ಪತ್ರ

Black Fungus in two Covid-19 patients intestine revealed by Delhi Sir Ganga Ram Hospital

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ