AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ರಾಕೇಶ್ ಟಿಕಾಯತ್, ಯುದ್ಧ್​ವೀರ್ ಸಿಂಗ್​​ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ

ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿಯಲಾಯಿತು.

Rakesh Tikait: ರಾಕೇಶ್ ಟಿಕಾಯತ್, ಯುದ್ಧ್​ವೀರ್ ಸಿಂಗ್​​ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ
ರಾಕೇಶ್ ಟಿಕಾಯತ್ ಮುಖಕ್ಕೆ ಕಪ್ಪು ಮಸಿ
TV9 Web
| Edited By: |

Updated on:May 30, 2022 | 2:14 PM

Share

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಮತ್ತು ಯುದ್ಧ್​ವೀರ್​ ಸಿಂಗ್ (Yudhvir Singh) ಮೇಲೆ ಕಪ್ಪು ಮಸಿ ಎರಚಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ  ರಾಜಧಾನಿಯಲ್ಲಿ ನಡೆದ  ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್  ಮತ್ತು ಯುದ್ಧ್​​ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ ಮಸಿ ಎರಚಲಾಗಿದೆ. ನಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಕಾಯತ್ ಮತ್ತು ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಯುತ್ತಿದ್ದಂತೆ ಕೆಲವರು ವಾಗ್ವಾದಕ್ಕಿಳಿದು ಮಸಿ ಎರಚಿದ್ದಾರೆ. ನಂತರ ಅಲ್ಲಿದ್ದ ಕುರ್ಚಿಗಳನ್ನು ಎಳೆದು ಬಿಸಾಡಿದ್ದಾರೆ. ರೈತ ನಾಯಕ ಚಂದ್ರಶೇಖರ್ ಅವರ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಟಿಕಾಯತ್ ಆರೋಪಿಸಿರುವುದಾಗಿ ‘ಟೈಮ್ಸ್ ನೌ’ ವರದಿ ಮಾಡಿದೆ.

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಚರ್ಚೆ ನಡೆಸಲು ನಗರದ ಗಾಂಧಿ ಭವನದಲ್ಲಿ ಕರೆದಿದ್ದ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್​ನಿಂದ ಹಲ್ಲೆ ನಡೆಸಿದ್ದು, ಮಸಿ ಬಳಿದಿದ್ದಾನೆ. ನಂತರ ಸಭೆಯಲ್ಲಿ ನೆರೆದಿದ್ದ ಇತರರು ಆತನನ್ನು ಹಿಡಿದು, ಕುರ್ಚಿಗಳಿಂದಲೇ ಥಳಿಸಿದರು. ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ, ಮಹಿಳೆಯರು ಭಯಗೊಂಡು ಕಿರುಚಿದರು.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗಳಲ್ಲಿ ರಾಕೇಶ್​ ಟಿಕಾಯತ್ ಮುಂಚೂಣಿಯಲ್ಲಿದ್ದರು. ನಂತರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಜಯಗಳಿಸಿತು. ಕೋಡಿಹಳ್ಳಿ ಚಂದ್ರಶೇಖರ್ ಮತ್ತು ರಾಕೇಶ್ ಟಿಕಾಯತ್ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿಕೊಂಡಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿಯಲಾಯಿತು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ರಾಕೇಶ್ ಟಿಕಾಯತ್, ‘ಇಂಥ ಘಟನೆ ನಡೆಯಬಾರದಿತ್ತು. ಪೊಲೀಸರು ಭದ್ರತೆ ಒದಗಿಸಿರಲಿಲ್ಲ. ಸರ್ಕಾರವು ಈ ಘಟನೆಯಲ್ಲಿ ಶಾಮೀಲಾಗಿದೆ’ ಎಂದು ಹೇಳಿದರು. ಪರಸ್ಪರ ಹೊಡೆದಾಟಕ್ಕೆ ಮುಂದಾದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

Published On - 1:45 pm, Mon, 30 May 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!