AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕಾಶಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

ಶಿವಕಾಶಿ ಸುತ್ತಮುತ್ತ ಪಟಾಕಿ ತಯಾರಿಕೆ ಮಾಡುವ ಸಾವಿರಾರು ಕಾರ್ಖಾನೆಗಳಿವೆ. ಅದರಲ್ಲೀಗ ಶಿವಕಾಶಿ ಪಕ್ಕದಲ್ಲೇ ಪುಥುಪಟ್ಟಿ ಎಂಬಲ್ಲಿರುವ ಒಂದು ಖಾಸಗಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದಾಗಿ ವರದಿಯಾಗಿದೆ.

ಶಿವಕಾಶಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 01, 2022 | 11:47 AM

Share

ಭಾರತದ ಪ್ರಸಿದ್ಧ ಪಟಾಕಿ ತಯಾರಿಕಾ ಸ್ಥಳ, ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆ (Sivakasi Firecracker Factory) ಯೊಂದರಲ್ಲಿ ಸ್ಫೋಟವುಂಟಾಗಿ, ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.  ಈ ಶಿವಕಾಶಿ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿದ್ದು, ಸದ್ಯ ಸ್ಫೋಟದಿಂದ ಧ್ವಂಸಗೊಂಡ ಕಾರ್ಖಾನೆ ಬಳಿ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅಪಾಯದಲ್ಲಿರುವವರನ್ನು ರಕ್ಷಿಸಲಾಗುತ್ತಿದೆ. ಹಾಗೇ, ಮೃತದೇಹಗಳನ್ನು ಹೊರತೆಗೆಯುವ ಕಾರ್ಯವೂ ನಡೆಯುತ್ತಿದೆ.  ಈ ನಾಲ್ವರೂ ಕೂಡ ಸಜೀವ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಶಿವಕಾಶಿ ಸುತ್ತಮುತ್ತ ಪಟಾಕಿ ತಯಾರಿಕೆ ಮಾಡುವ ಸಾವಿರಾರು ಕಾರ್ಖಾನೆಗಳಿವೆ. ಅದರಲ್ಲೀಗ ಶಿವಕಾಶಿ ಪಕ್ಕದಲ್ಲೇ ಪುಥುಪಟ್ಟಿ ಎಂಬಲ್ಲಿರುವ ಒಂದು ಖಾಸಗಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದಾಗಿ ವರದಿಯಾಗಿದೆ. ಕೊಠಡಿಯೊಂದರಲ್ಲಿ ಸ್ಫೋಟವುಂಟಾದ ಹೊತ್ತಲ್ಲಿ, ಕಾರ್ಖಾನೆಯಲ್ಲಿ 30ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ ಫ್ಯಾಕ್ಟರಿಯ ಎರಡು ಕೋಣೆಗಳು ಸಂಪೂರ್ಣ ಧ್ವಂಸಗೊಂಡಿವೆ.

ತಮಿಳುನಾಡಿನ ಶಿವಕಾಶಿಯನ್ನು ಭಾರತದ ಪಟಾಕಿ ತಯಾರಿಕೆಗಳ ರಾಜಧಾನಿ ಎಂದೇ ಕರೆಯಲಾಗುತ್ತದೆ. ಹಾಗೇ, ಇದು ಅತ್ಯಂತ ಅಪಾಯಕಾರಿ ಸ್ಥಳವೂ ಹೌದು. ಇಲ್ಲಿ ಸ್ಫೋಟ, ಬೆಂಕಿ ದುರಂತಗಳು ಪದೇಪದೆ ನಡೆಯುತ್ತಿರುತ್ತವೆ. ಸಾವು ನೋವು ನಿರಂತರ ಎಂಬಂತೆ ಆಗಿಬಿಟ್ಟಿದೆ. ಕಳೆದ ವರ್ಷ 12ಕ್ಕೂ ಹೆಚ್ಚು ಪಟಾಕಿ ತಯಾರಿಕಾ ಕಾರ್ಖಾನೆಗಳು ಸ್ಫೋಟಗೊಂದು ಒಟ್ಟಾರೆ 50ಕ್ಕೂ ಹೆಚ್ಚು ಮಂದಿಯ ಜೀವ ಹೋಗಿತ್ತು. 2021ರ ಫೆಬ್ರವರಿಯಲ್ಲಿ ಫ್ಯಾಕ್ಟರಿಯೊಂದರಲ್ಲಿ ಅಗ್ನಿದುರಂತವಾಗಿ ಆರು ಮಂದಿ ಸಾವನ್ನಪ್ಪಿದ್ದರು. 2013ರಲ್ಲಿ ಅತಿದೊಡ್ಡ ಮಟ್ಟದ ದುರಂತ ನಡೆದಿತ್ತು. ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿ, ಬೆಂಕಿ ಹೊತ್ತಿಕೊಂಡ ಪರಿಣಾಮ 45ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಸುಮಾರು 70 ಜನ ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ: ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು

Published On - 11:39 am, Sat, 1 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ