AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕಾಶಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

ಶಿವಕಾಶಿ ಸುತ್ತಮುತ್ತ ಪಟಾಕಿ ತಯಾರಿಕೆ ಮಾಡುವ ಸಾವಿರಾರು ಕಾರ್ಖಾನೆಗಳಿವೆ. ಅದರಲ್ಲೀಗ ಶಿವಕಾಶಿ ಪಕ್ಕದಲ್ಲೇ ಪುಥುಪಟ್ಟಿ ಎಂಬಲ್ಲಿರುವ ಒಂದು ಖಾಸಗಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದಾಗಿ ವರದಿಯಾಗಿದೆ.

ಶಿವಕಾಶಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jan 01, 2022 | 11:47 AM

Share

ಭಾರತದ ಪ್ರಸಿದ್ಧ ಪಟಾಕಿ ತಯಾರಿಕಾ ಸ್ಥಳ, ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆ (Sivakasi Firecracker Factory) ಯೊಂದರಲ್ಲಿ ಸ್ಫೋಟವುಂಟಾಗಿ, ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.  ಈ ಶಿವಕಾಶಿ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿದ್ದು, ಸದ್ಯ ಸ್ಫೋಟದಿಂದ ಧ್ವಂಸಗೊಂಡ ಕಾರ್ಖಾನೆ ಬಳಿ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅಪಾಯದಲ್ಲಿರುವವರನ್ನು ರಕ್ಷಿಸಲಾಗುತ್ತಿದೆ. ಹಾಗೇ, ಮೃತದೇಹಗಳನ್ನು ಹೊರತೆಗೆಯುವ ಕಾರ್ಯವೂ ನಡೆಯುತ್ತಿದೆ.  ಈ ನಾಲ್ವರೂ ಕೂಡ ಸಜೀವ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಶಿವಕಾಶಿ ಸುತ್ತಮುತ್ತ ಪಟಾಕಿ ತಯಾರಿಕೆ ಮಾಡುವ ಸಾವಿರಾರು ಕಾರ್ಖಾನೆಗಳಿವೆ. ಅದರಲ್ಲೀಗ ಶಿವಕಾಶಿ ಪಕ್ಕದಲ್ಲೇ ಪುಥುಪಟ್ಟಿ ಎಂಬಲ್ಲಿರುವ ಒಂದು ಖಾಸಗಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದಾಗಿ ವರದಿಯಾಗಿದೆ. ಕೊಠಡಿಯೊಂದರಲ್ಲಿ ಸ್ಫೋಟವುಂಟಾದ ಹೊತ್ತಲ್ಲಿ, ಕಾರ್ಖಾನೆಯಲ್ಲಿ 30ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ ಫ್ಯಾಕ್ಟರಿಯ ಎರಡು ಕೋಣೆಗಳು ಸಂಪೂರ್ಣ ಧ್ವಂಸಗೊಂಡಿವೆ.

ತಮಿಳುನಾಡಿನ ಶಿವಕಾಶಿಯನ್ನು ಭಾರತದ ಪಟಾಕಿ ತಯಾರಿಕೆಗಳ ರಾಜಧಾನಿ ಎಂದೇ ಕರೆಯಲಾಗುತ್ತದೆ. ಹಾಗೇ, ಇದು ಅತ್ಯಂತ ಅಪಾಯಕಾರಿ ಸ್ಥಳವೂ ಹೌದು. ಇಲ್ಲಿ ಸ್ಫೋಟ, ಬೆಂಕಿ ದುರಂತಗಳು ಪದೇಪದೆ ನಡೆಯುತ್ತಿರುತ್ತವೆ. ಸಾವು ನೋವು ನಿರಂತರ ಎಂಬಂತೆ ಆಗಿಬಿಟ್ಟಿದೆ. ಕಳೆದ ವರ್ಷ 12ಕ್ಕೂ ಹೆಚ್ಚು ಪಟಾಕಿ ತಯಾರಿಕಾ ಕಾರ್ಖಾನೆಗಳು ಸ್ಫೋಟಗೊಂದು ಒಟ್ಟಾರೆ 50ಕ್ಕೂ ಹೆಚ್ಚು ಮಂದಿಯ ಜೀವ ಹೋಗಿತ್ತು. 2021ರ ಫೆಬ್ರವರಿಯಲ್ಲಿ ಫ್ಯಾಕ್ಟರಿಯೊಂದರಲ್ಲಿ ಅಗ್ನಿದುರಂತವಾಗಿ ಆರು ಮಂದಿ ಸಾವನ್ನಪ್ಪಿದ್ದರು. 2013ರಲ್ಲಿ ಅತಿದೊಡ್ಡ ಮಟ್ಟದ ದುರಂತ ನಡೆದಿತ್ತು. ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿ, ಬೆಂಕಿ ಹೊತ್ತಿಕೊಂಡ ಪರಿಣಾಮ 45ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಸುಮಾರು 70 ಜನ ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ: ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು

Published On - 11:39 am, Sat, 1 January 22

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್