AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್