AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ