AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ