AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ