AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ