AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 10:52 AM

Share

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

Follow Us
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!