AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ

ಹಿಮಾಚಲ ಪ್ರದೇಶದ ಪೊಲೀಸ್ ಠಾಣೆ ಬಳಿ ಪ್ರಬಲ ಸ್ಫೋಟ ನಡೆದಿದೆ. ಇದರಿಂದಾಗಿ ಸುತ್ತಲಿನ ಕಟ್ಟಡಗಳ ಕಿಟಕಿಗಳು ಒಡೆದುಹೋಗಿವೆ. ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದಲ್ಲಿ ಇಂದು ಪೊಲೀಸ್ ಠಾಣೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಇದರ ಪರಿಣಾಮವಾಗಿ ನೂರಾರು ಮೀಟರ್ ದೂರದಲ್ಲಿರುವ ಮನೆಗಳಲ್ಲಿಯೂ ಬಿರುಕು ಬಿಟ್ಟಿದೆ.

Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ
Himachal Pradesh Blast
ಸುಷ್ಮಾ ಚಕ್ರೆ
|

Updated on:Jan 01, 2026 | 4:35 PM

Share

ಶಿಮ್ಲಾ, ಜನವರಿ 1: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದ ಪೊಲೀಸ್ ಠಾಣೆ ಬಳಿ ಇಂದು ಭಾರೀ ಸ್ಫೋಟ (Blast) ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಸ್ಫೋಟದ ಕಾರಣವನ್ನು ಗುರುತಿಸಲು ತನಿಖೆ ಆರಂಭಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಲಗಢ ಪೊಲೀಸ್ ಠಾಣೆ ಬಳಿಯ ಲೇನ್‌ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವು ಎಷ್ಟು ಬಲವಾಗಿತ್ತು ಎಂದರೆ ಈ ಸ್ಥಳದಿಂದ ನೂರಾರು ಮೀಟರ್ ದೂರದಲ್ಲಿರುವ ಸೇನಾ ಕ್ಯಾಂಟೀನ್ ಸೇರಿದಂತೆ ಹತ್ತಿರದ ಕಟ್ಟಡಗಳ ಕಿಟಕಿಗಳು ಬಿರುಕು ಬಿಟ್ಟಿವೆ.

ಸ್ಥಳೀಯರು ಹೇಳುವಂತೆ 400ರಿಂದ 500 ಮೀಟರ್‌ಗಳ ದೂರದಿಂದ ಜೋರಾದ ಶಬ್ದ ಕೇಳಿಬಂದಿತು. 16 ಎಂಎಂ ದಪ್ಪದ ಗಾಜುಗಳು ಸಹ ಒಡೆದುಹೋಗಿವೆ. ಸುತ್ತಲಿನ ಕಟ್ಟಡಗಳೆಲ್ಲವೂ ನಡುಗಿದವು ಎಂದು ಹತ್ತಿರದಲ್ಲಿ ಕುಳಿತಿದ್ದ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಇಂದು ಬೆಳಿಗ್ಗೆ 9.40ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ವಿಧಿವಿಜ್ಞಾನ ತಂಡವು ವಿವಿಧ ಸ್ಥಳಗಳಿಂದ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ?

ಯಾವುದೇ ಇ-ಮೇಲ್ ಅಥವಾ ಬೆದರಿಕೆ ಕರೆ ಬಂದಿಲ್ಲ. ಪ್ರಾಥಮಿಕವಾಗಿ ಸ್ಫೋಟಕಗಳನ್ನು ಒಳಗೊಂಡ ಯಾವುದೇ ದುಷ್ಕೃತ್ಯ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಪ್ರದೇಶದಲ್ಲಿ ಬಹಳಷ್ಟು ಸ್ಕ್ರ್ಯಾಪ್‌ಗಳು ಕೂಡ ರಾಶಿ ಬಿದ್ದಿವೆ.

ಈ ಸ್ಫೋಟದ ನಂತರ ಹಿಮಾಚಲ ಪ್ರದೇಶ ಪೊಲೀಸರು ಕಾರ್ಯಪ್ರವೃತ್ತರಾದರು ಮತ್ತು ಸ್ಫೋಟದ ಕುರಿತು ಹೆಚ್ಚಿನ ತನಿಖೆಗಾಗಿ ಆ ಪ್ರದೇಶದಲ್ಲಿ ತಕ್ಷಣವೇ ಬ್ಯಾರಿಕೇಡ್ ಹಾಕಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Thu, 1 January 26

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್