AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ
ಪೊಲೀಸ್​
ನಯನಾ ರಾಜೀವ್
|

Updated on: Dec 17, 2024 | 10:09 AM

Share

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

ಗ್ಯಾಂಗ್​ಸ್ಟರ್ ಜೀವನ್ ಫೌಜಿ ಈ ಸ್ಫೋಟದ ಹೊಣೆ ಹೊತ್ತಿದ್ದಾನೆ. 3 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯೊಳಗಿನ ಗೋಡೆಯ ಮೇಲಿನ ಫೋಟೊ ಕೆಳಗೆ ಬಿದ್ದಿದೆ. ಇದಕ್ಕೂ ಮುನ್ನ ಅಮೃತಸರದ ಮಜಿತಾ ಪೊಲೀಸ್ ಠಾಣೆಯೊಳಗೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಪೊಲೀಸ್ ಠಾಣೆಯ ಕಿಟಕಿ ಗಾಜುಗಳು ಒಡೆದಿವೆ. ಈ ಸ್ಫೋಟದ ನಂತರ, ಪ್ರದೇಶದಲ್ಲಿ ಭೀತಿ ಹರಡಿತು. ಪೊಲೀಸ್ ಠಾಣೆ ಗೇಟ್ ಬಳಿಯ ತೆರೆದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಪೊಲೀಸ್ ಠಾಣೆಯ ಗೇಟ್‌ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ಓದಿ: Viral Video: ಏಕಾಏಕಿ ಫುಟ್‌ಪಾತ್​ನಲ್ಲಿ ಸ್ಫೋಟ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪೊಲೀಸ್ ಠಾಣೆಯೊಳಗೆ ಯಾವುದೇ ಸ್ಫೋಟ ಸಂಭವಿಸಿಲ್ಲ, ಆದರೆ ನಾವು ತನಿಖೆ ನಡೆಸುತ್ತಿದ್ದೇವೆ. ಇಂದು ಬೆಳಗ್ಗೆ ಸ್ಫೋಟದ ಸದ್ದು ಖಚಿತವಾಗಿ ಕೇಳಿ ಬಂದಿದೆ. ಇಂತಹ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 10 ಜನರನ್ನು ಯುಎಪಿಎ ಅಡಿಯಲ್ಲಿ ಬಂಧಿಸುವ ಮೂಲಕ ನಾವು ಇತ್ತೀಚೆಗೆ ಮಾಡ್ಯೂಲ್ ಅನ್ನು ಭೇದಿಸಿದ್ದೇವೆ.

1984ರಲ್ಲಿ ಬಳಸಿದ ಡೆಡ್ ಡ್ರಾಪ್ ಮಾದರಿಯಲ್ಲೇ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ವರದಿಯೊಂದು ಎಚ್ಚರಿಸಿದ್ದು ನಂತರ ಕೇಂದ್ರ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?