AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ
ಪೊಲೀಸ್​
ನಯನಾ ರಾಜೀವ್
|

Updated on: Dec 17, 2024 | 10:09 AM

Share

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

ಗ್ಯಾಂಗ್​ಸ್ಟರ್ ಜೀವನ್ ಫೌಜಿ ಈ ಸ್ಫೋಟದ ಹೊಣೆ ಹೊತ್ತಿದ್ದಾನೆ. 3 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯೊಳಗಿನ ಗೋಡೆಯ ಮೇಲಿನ ಫೋಟೊ ಕೆಳಗೆ ಬಿದ್ದಿದೆ. ಇದಕ್ಕೂ ಮುನ್ನ ಅಮೃತಸರದ ಮಜಿತಾ ಪೊಲೀಸ್ ಠಾಣೆಯೊಳಗೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಪೊಲೀಸ್ ಠಾಣೆಯ ಕಿಟಕಿ ಗಾಜುಗಳು ಒಡೆದಿವೆ. ಈ ಸ್ಫೋಟದ ನಂತರ, ಪ್ರದೇಶದಲ್ಲಿ ಭೀತಿ ಹರಡಿತು. ಪೊಲೀಸ್ ಠಾಣೆ ಗೇಟ್ ಬಳಿಯ ತೆರೆದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಪೊಲೀಸ್ ಠಾಣೆಯ ಗೇಟ್‌ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ಓದಿ: Viral Video: ಏಕಾಏಕಿ ಫುಟ್‌ಪಾತ್​ನಲ್ಲಿ ಸ್ಫೋಟ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪೊಲೀಸ್ ಠಾಣೆಯೊಳಗೆ ಯಾವುದೇ ಸ್ಫೋಟ ಸಂಭವಿಸಿಲ್ಲ, ಆದರೆ ನಾವು ತನಿಖೆ ನಡೆಸುತ್ತಿದ್ದೇವೆ. ಇಂದು ಬೆಳಗ್ಗೆ ಸ್ಫೋಟದ ಸದ್ದು ಖಚಿತವಾಗಿ ಕೇಳಿ ಬಂದಿದೆ. ಇಂತಹ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 10 ಜನರನ್ನು ಯುಎಪಿಎ ಅಡಿಯಲ್ಲಿ ಬಂಧಿಸುವ ಮೂಲಕ ನಾವು ಇತ್ತೀಚೆಗೆ ಮಾಡ್ಯೂಲ್ ಅನ್ನು ಭೇದಿಸಿದ್ದೇವೆ.

1984ರಲ್ಲಿ ಬಳಸಿದ ಡೆಡ್ ಡ್ರಾಪ್ ಮಾದರಿಯಲ್ಲೇ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ವರದಿಯೊಂದು ಎಚ್ಚರಿಸಿದ್ದು ನಂತರ ಕೇಂದ್ರ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ