AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ
ಪೊಲೀಸ್​
ನಯನಾ ರಾಜೀವ್
|

Updated on: Dec 17, 2024 | 10:09 AM

Share

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

ಗ್ಯಾಂಗ್​ಸ್ಟರ್ ಜೀವನ್ ಫೌಜಿ ಈ ಸ್ಫೋಟದ ಹೊಣೆ ಹೊತ್ತಿದ್ದಾನೆ. 3 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯೊಳಗಿನ ಗೋಡೆಯ ಮೇಲಿನ ಫೋಟೊ ಕೆಳಗೆ ಬಿದ್ದಿದೆ. ಇದಕ್ಕೂ ಮುನ್ನ ಅಮೃತಸರದ ಮಜಿತಾ ಪೊಲೀಸ್ ಠಾಣೆಯೊಳಗೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಪೊಲೀಸ್ ಠಾಣೆಯ ಕಿಟಕಿ ಗಾಜುಗಳು ಒಡೆದಿವೆ. ಈ ಸ್ಫೋಟದ ನಂತರ, ಪ್ರದೇಶದಲ್ಲಿ ಭೀತಿ ಹರಡಿತು. ಪೊಲೀಸ್ ಠಾಣೆ ಗೇಟ್ ಬಳಿಯ ತೆರೆದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಪೊಲೀಸ್ ಠಾಣೆಯ ಗೇಟ್‌ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ಓದಿ: Viral Video: ಏಕಾಏಕಿ ಫುಟ್‌ಪಾತ್​ನಲ್ಲಿ ಸ್ಫೋಟ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪೊಲೀಸ್ ಠಾಣೆಯೊಳಗೆ ಯಾವುದೇ ಸ್ಫೋಟ ಸಂಭವಿಸಿಲ್ಲ, ಆದರೆ ನಾವು ತನಿಖೆ ನಡೆಸುತ್ತಿದ್ದೇವೆ. ಇಂದು ಬೆಳಗ್ಗೆ ಸ್ಫೋಟದ ಸದ್ದು ಖಚಿತವಾಗಿ ಕೇಳಿ ಬಂದಿದೆ. ಇಂತಹ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 10 ಜನರನ್ನು ಯುಎಪಿಎ ಅಡಿಯಲ್ಲಿ ಬಂಧಿಸುವ ಮೂಲಕ ನಾವು ಇತ್ತೀಚೆಗೆ ಮಾಡ್ಯೂಲ್ ಅನ್ನು ಭೇದಿಸಿದ್ದೇವೆ.

1984ರಲ್ಲಿ ಬಳಸಿದ ಡೆಡ್ ಡ್ರಾಪ್ ಮಾದರಿಯಲ್ಲೇ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ವರದಿಯೊಂದು ಎಚ್ಚರಿಸಿದ್ದು ನಂತರ ಕೇಂದ್ರ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ