AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

Blast: ಅಮೃತಸರ ಪೊಲೀಸ್​ ಠಾಣೆ ಎದುರು ಗ್ರೆನೇಡ್​ ಸ್ಫೋಟ
ಪೊಲೀಸ್​
ನಯನಾ ರಾಜೀವ್
|

Updated on: Dec 17, 2024 | 10:09 AM

Share

ಪಂಜಾಬ್‌ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆ ಬಳಿ ಇಂದು ಮುಂಜಾನೆ ಭಾರೀ ಸ್ಫೋಟದ ಸದ್ದು ಕೇಳಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ಆ ಭಾಗದ ಜನರು ಭಯಭೀತರಾಗಿದ್ದರು ಎಂದು ಹೇಳಲಾಗುತ್ತಿದೆ. ನಮಗೂ ಸದ್ದು ಕೇಳಿದೆ, ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸ್ ಠಾಣಾಧಿಕಾರಿ ಜಸ್ಬೀರ್ ಸಿಂಗ್ ಹೇಳಿದ್ದಾರೆ.

ಗ್ಯಾಂಗ್​ಸ್ಟರ್ ಜೀವನ್ ಫೌಜಿ ಈ ಸ್ಫೋಟದ ಹೊಣೆ ಹೊತ್ತಿದ್ದಾನೆ. 3 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯೊಳಗಿನ ಗೋಡೆಯ ಮೇಲಿನ ಫೋಟೊ ಕೆಳಗೆ ಬಿದ್ದಿದೆ. ಇದಕ್ಕೂ ಮುನ್ನ ಅಮೃತಸರದ ಮಜಿತಾ ಪೊಲೀಸ್ ಠಾಣೆಯೊಳಗೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಪೊಲೀಸ್ ಠಾಣೆಯ ಕಿಟಕಿ ಗಾಜುಗಳು ಒಡೆದಿವೆ. ಈ ಸ್ಫೋಟದ ನಂತರ, ಪ್ರದೇಶದಲ್ಲಿ ಭೀತಿ ಹರಡಿತು. ಪೊಲೀಸ್ ಠಾಣೆ ಗೇಟ್ ಬಳಿಯ ತೆರೆದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಪೊಲೀಸ್ ಠಾಣೆಯ ಗೇಟ್‌ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ಓದಿ: Viral Video: ಏಕಾಏಕಿ ಫುಟ್‌ಪಾತ್​ನಲ್ಲಿ ಸ್ಫೋಟ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪೊಲೀಸ್ ಠಾಣೆಯೊಳಗೆ ಯಾವುದೇ ಸ್ಫೋಟ ಸಂಭವಿಸಿಲ್ಲ, ಆದರೆ ನಾವು ತನಿಖೆ ನಡೆಸುತ್ತಿದ್ದೇವೆ. ಇಂದು ಬೆಳಗ್ಗೆ ಸ್ಫೋಟದ ಸದ್ದು ಖಚಿತವಾಗಿ ಕೇಳಿ ಬಂದಿದೆ. ಇಂತಹ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 10 ಜನರನ್ನು ಯುಎಪಿಎ ಅಡಿಯಲ್ಲಿ ಬಂಧಿಸುವ ಮೂಲಕ ನಾವು ಇತ್ತೀಚೆಗೆ ಮಾಡ್ಯೂಲ್ ಅನ್ನು ಭೇದಿಸಿದ್ದೇವೆ.

1984ರಲ್ಲಿ ಬಳಸಿದ ಡೆಡ್ ಡ್ರಾಪ್ ಮಾದರಿಯಲ್ಲೇ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ವರದಿಯೊಂದು ಎಚ್ಚರಿಸಿದ್ದು ನಂತರ ಕೇಂದ್ರ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ