AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ

ತೆಲಂಗಾಣದ ಅಲೆರ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ಬೋಗಿಯೊಂದರಿಂದ ಹೊಗೆ ಹೊರಬಂದಿದ್ದು, ಪ್ರಯಾಣಿಕರು ಭೀತಿಯಿಂದ ಹೊರಗೆ ಓಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ರೈಲಿನ ಎಸ್‌5 (S5) ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ರೈಲು ಅಲೆರ್ ನಿಲ್ದಾಣದ ವ್ಯಾಪ್ತಿಯಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಎಚ್ಚೆತ್ತ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ
ರೈಲುImage Credit source: X Account
ನಯನಾ ರಾಜೀವ್
|

Updated on: Apr 26, 2026 | 7:47 AM

Share

ಭುವನಗಿರಿ, ಏಪ್ರಿಲ್ 26: ತೆಲಂಗಾಣದ ಅಲೆರ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ಬೋಗಿಯೊಂದರಿಂದ ಹೊಗೆ ಹೊರಬಂದಿದ್ದು, ಪ್ರಯಾಣಿಕರು ಭೀತಿಯಿಂದ ಹೊರಗೆ ಓಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ರೈಲಿನ ಎಸ್‌5 (S5) ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ರೈಲು ಅಲೆರ್ ನಿಲ್ದಾಣದ ವ್ಯಾಪ್ತಿಯಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಎಚ್ಚೆತ್ತ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಬೋಗಿಯಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಕೆಳಗಿಳಿದಿದ್ದಾರೆ. ಈವರೆಗೆ ದೊರೆತ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ಬಗ್ಗೆ ಅಧಿಕೃತ ವರದಿಗಳಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರೈಲ್ವೆ ತಾಂತ್ರಿಕ ತಂಡವು ಬೋಗಿಯನ್ನು ಪರೀಕ್ಷಿಸುತ್ತಿದ್ದು, ಬೆಂಕಿ ಪೂರ್ಣವಾಗಿ ಆರಿರುವುದನ್ನು ಖಚಿತಪಡಿಸಿಕೊಂಡ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ!

ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ (Short Circuit) ಆಗಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಹಾನಿಯ ಬಗ್ಗೆ ಸಮಗ್ರ ವರದಿ ನೀಡಲಿದ್ದಾರೆ.

ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ರೈಲ್ವೆ ಇಲಾಖೆಯು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದೆ. ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಪರ್ಯಾಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us