AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹುಟ್ಟುಹಬ್ಬ ಪ್ರಯುಕ್ತ ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಷನ್​ನಿಂದ ವಿಕಸಿತ ಭಾರತ ಫೆಲೋಶಿಪ್ ಆರಂಭ

ಈ ಫೆಲೋಶಿಪ್ ಭಾರತದ ಬಗ್ಗೆ ಅರ್ಥಪೂರ್ಣ ನಿರೂಪಣೆಗೆ ಕೊಡುಗೆ ನೀಡಲು ಉದಯೋನ್ಮುಖ ಪ್ರತಿಭೆಗಳು, ಅನುಭವಿ ಮತ್ತು ಅಸಾಧಾರಣ ವೃತ್ತಿಪರರು, ಶಿಕ್ಷಣ ತಜ್ಞರು ಮತ್ತು ರಾಷ್ಟ್ರದ ಒಳಗೆ ಮತ್ತು ಜಗತ್ತಿನಾದ್ಯಂತದ ಪರಿಣಿತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

ಮೋದಿ ಹುಟ್ಟುಹಬ್ಬ ಪ್ರಯುಕ್ತ ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಷನ್​ನಿಂದ ವಿಕಸಿತ ಭಾರತ ಫೆಲೋಶಿಪ್ ಆರಂಭ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 17, 2024 | 9:58 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಪ್ರಕಾಶನ ಮತ್ತು ಜ್ಞಾನ ಕೇಂದ್ರ ಮತ್ತು ‘ವಿಕಸಿತ್ ಭಾರತ್ ಫೆಲೋಶಿಪ್’ ಅನ್ನು ಪ್ರಾರಂಭಿಸಿದೆ. ಈ ಫೌಂಡೇಶನ್‌ನಿಂದ ಒಟ್ಟು 25 ಫೆಲೋಶಿಪ್‌ಗಳನ್ನು ನೀಡಲಾಗುವುದು. ಇದನ್ನು ಮೂರು ಹಂತಗಳಾಗಿ ವಿಂಗಡಿಸಲಾಗಿದೆ. ಅವುಗಳೆಂದರೆ, ಬ್ಲೂಕ್ರಾಫ್ಟ್ ಅಸೋಸಿಯೇಟ್ ಫೆಲೋಶಿಪ್, ಬ್ಲೂಕ್ರಾಫ್ಟ್ ಸೀನಿಯರ್ ಫೆಲೋಶಿಪ್ ಮತ್ತು ಬ್ಲೂಕ್ರಾಫ್ಟ್ ಡಿಸ್ಟಿಂಗ್ವಿಶ್ಡ್ ಫೆಲೋಶಿಪ್.

ಈ ಫೆಲೋಶಿಪ್ ನಾನ್-ಫಿಕ್ಷನ್ ಪುಸ್ತಕಗಳು, ಲೇಖನಗಳು, ಸಂಶೋಧನಾ ಪ್ರಬಂಧಗಳು, ಸಾಮಾಜಿಕ ವಿಷಯಗಳು ಮತ್ತು ಮೌಲ್ಯಗಳನ್ನು ತಿಳಿಸುವ ಮಕ್ಕಳ ಸಾಹಿತ್ಯ, ಕಾಫಿ ಟೇಬಲ್ ಪುಸ್ತಕಗಳು ಮತ್ತು ಕೇಸ್ ಸ್ಟಡೀಸ್ ಸೇರಿದಂತೆ ವಿವಿಧ ಸ್ವರೂಪಗಳ ಮೂಲಕ ರಾಷ್ಟ್ರದ ವೈವಿಧ್ಯಮಯ ಪ್ರಯಾಣಗಳನ್ನು ದಾಖಲಿಸಲು ಪ್ರಯತ್ನಿಸುತ್ತದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 1ರೊಳಗೆ bluekraft.in/fellowship ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ದೇಶಾದ್ಯಂತ ಬುಲ್ಡೋಜರ್​​ ಕಾರ್ಯಾಚರಣೆಗೆ ತಡೆ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬ್ಲೂಕ್ರಾಫ್ಟ್ ಅಸೋಸಿಯೇಟ್ ಫೆಲೋಶಿಪ್ ಮೂಲಕ ಮಾಸಿಕ 75,000 ಸ್ಟೈಫಂಡ್ ನೀಡಲಾಗುತ್ತದೆ. ಬ್ಲೂಕ್ರಾಫ್ಟ್ ಹಿರಿಯ ಫೆಲೋ 1,25,000 ಮಾಸಿಕ ಸ್ಟೈಫಂಡ್ ಅನ್ನು ಸ್ವೀಕರಿಸುತ್ತಾರೆ. ಮತ್ತು ಬ್ಲೂಕ್ರಾಫ್ಟ್ ಡಿಸ್ಟಿಂಗ್ವಿಶ್ಡ್ ಫೆಲೋ ಒಂದು ವರ್ಷದ ಅವಧಿಯಲ್ಲಿ 2,00,000 ರೂ. ಮಾಸಿಕ ಸ್ಟೈಫಂಡ್ ಅನ್ನು ಪಡೆಯುತ್ತಾರೆ.

ಈ ಫೆಲೋಶಿಪ್ ಪಡೆಯುವವರು ಸಂಶೋಧನೆ ಮತ್ತು ಬರವಣಿಗೆಗಾಗಿ ವಿಶೇಷ ಸಂಪನ್ಮೂಲಗಳೊಂದಿಗೆ ಅನುಭವಿ ವಿಷಯ ತಜ್ಞರು, ವೃತ್ತಿಪರರು ಮತ್ತು ಚಿಂತನೆಯ ನಾಯಕರೊಂದಿಗೆ ಮಾರ್ಗದರ್ಶನ ಮತ್ತು ಅವಕಾಶಗಳಿಗೆ ಪ್ರವೇಶವನ್ನು ಪಡೆಯುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ಪೂರ್ಣಗೊಂಡ ಕೃತಿಗಳನ್ನು ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಪ್ರಕಟಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ