AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

BMC Election Results: ಈ ಬಾರಿ ಎಲ್ಲರೂ ನಿರೀಕ್ಷೆ ಮಾಡಿದ್ದಂತೆ ಮಹಾರಾಷ್ಟ್ರದ ಬಿಎಂಸಿ (ಬೃಹನ್​ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಚುನಾವಣೆಯಲ್ಲಿ ಠಾಕ್ರೆ ಸೋದರರಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ಮಹಾಯುತಿ ಭಾರೀ ಗೆಲುವು ಕಾಣುವ ಮೂಲಕ ಇತಿಹಾಸ ಸೃಷ್ಟಿಸಿದೆ. 25 ವರ್ಷಗಳ ಕಾಲ ಉದ್ಧವ್ ಠಾಕ್ರೆಯ ಭದ್ರಕೋಟೆಯಾಗಿದ್ದ ಬಿಎಂಸಿ ಈ ಬಾರಿ ಅವರ ಕೈತಪ್ಪಿದೆ. ಮುಂಬೈಯನ್ನು ಭಾರತದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಮುನ್ಸಿಪಲ್ ಕಾರ್ಪೋರೇಷನ್ ಎಂದು ಪರಿಗಣಿಸಲಾಗುತ್ತದೆ. ಇದೇ ಕಾರಣದಿಂದಾಗಿ ಈ ಚುನಾವಣೆ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ.

ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ
Eknath Shinde And Devendra Fadnavis
ಸುಷ್ಮಾ ಚಕ್ರೆ
|

Updated on:Jan 16, 2026 | 7:16 PM

Share

ಮುಂಬೈ, ಜನವರಿ 16: 25 ವರ್ಷಗಳ ನಂತರ ಮುಂಬೈ ನಾಗರಿಕ ಸಂಸ್ಥೆಯಾದ ಬಿಎಂಸಿ ಮೇಲೆ ಠಾಕ್ರೆ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC Elections) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು ಭಾರಿ ಗೆಲುವು ಕಂಡಿದೆ. ಗುರುವಾರ ಬಿಎಂಸಿ ಚುನಾವಣೆ ನಡೆದಿತ್ತು. ಭಾರತದ ಆರ್ಥಿಕ ರಾಜಧಾನಿಯಾಗಿರುವ ಮುಂಬೈ ಅನೇಕ ಉದ್ಯಮಿಗಳು, ಸೆಲಬ್ರಿಟಿಗಳು, ರಾಜಕಾರಣಿಗಳ ವಾಸ ಸ್ಥಾನ. ಇದು ಭಾರತದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಕಾರ್ಪೋರೇಷನ್ ಆಗಿದೆ. ಬಿಎಂಸಿ ಸೇರಿದಂತೆ ಮಹಾರಾಷ್ಟ್ರದಾದ್ಯಂತ 29 ನಾಗರಿಕ ಸಂಸ್ಥೆಗಳಲ್ಲಿ ಮತದಾನ ನಡೆದಿತ್ತು. ಬಹುತೇಕ ಅನೇಕ ಕಡೆ ಬಿಜೆಪಿ ಈ ಬಾರಿ ಗೆಲುವಿನ ನಗು ಬೀರಿರುವುದು ವಿಶೇಷ. ಇದು ಮಹಾರಾಷ್ಟ್ರದಲ್ಲಿ ಶಿವಸೇನೆಯ ಪತನದ ಸಂಕೇತವಾಗಿದೆ.

ವಾರ್ಷಿಕ ಬಜೆಟ್ 74,400 ಕೋಟಿ ರೂ. ಮೀರಿರುವ ಬಿಎಂಸಿಯಲ್ಲಿ 9 ವರ್ಷಗಳ ವಿಳಂಬದ ನಂತರ ನಡೆದ ಚುನಾವಣೆಯಲ್ಲಿ 227 ಸ್ಥಾನಗಳಿಗೆ 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2017ರಲ್ಲಿ ನಡೆದ ಕೊನೆಯ ಚುನಾವಣೆಯಲ್ಲಿ, ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಒಂದಾಗಿದ್ದ ಸಂಯುಕ್ತ ಶಿವಸೇನೆ ದಶಕಗಳಿಂದ ನಿಯಂತ್ರಿಸುತ್ತಿದ್ದ ಬಿಎಂಸಿಯ ಮೇಲೆ ತನ್ನ ಹಿಡಿತವನ್ನು ಉಳಿಸಿಕೊಂಡಿತ್ತು. ಈ ಬಾರಿಯ ಚುನಾವಣೆಯಲ್ಲಿ ಅವರಿಬ್ಬರೂ ಬೇರೆ ಬೇರೆಯಾಗಿ ಅಖಾಡಕ್ಕಿಳಿದಿದ್ದರು.

ಇದನ್ನೂ ಓದಿ: Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ?

ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟವು ವಿಜಯಶಾಲಿಯಾಗಿ ಹೊರಹೊಮ್ಮಿದೆ. ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ ಐತಿಹಾಸಿಕ ಸಾಧನೆಯ ನಂತರ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಪ್ರಭಾವಿ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ನಾಯಕತ್ವದಲ್ಲಿ ಬಿಜೆಪಿ 2017ರಲ್ಲಿ ತನ್ನ ಹಿಂದಿನ ಗರಿಷ್ಠ 82 ಸ್ಥಾನಗಳನ್ನು ಮೀರಿದೆ. ಇದುವರೆಗೆ ಬಿಎಂಸಿಯ 227 ವಾರ್ಡ್‌ಗಳಲ್ಲಿ 88ರಲ್ಲಿ ಬಿಜೆಪಿ ಗೆದ್ದಿದೆ ಅಥವಾ ಮುನ್ನಡೆ ಸಾಧಿಸಿದೆ. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 28 ಸ್ಥಾನಗಳಲ್ಲಿ ಮುಂದಿದೆ. ಈ ಮಹಾಯುತಿ ಮೈತ್ರಿಕೂಟವು 114ರ ಅರ್ಧದಷ್ಟನ್ನು ಆರಾಮವಾಗಿ ದಾಟಿದೆ.

ಇದನ್ನೂ ಓದಿ: BJP National President Election Date: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ

29 ನಾಗರಿಕ ಸಂಸ್ಥೆಗಳ 893 ವಾರ್ಡ್‌ಗಳಲ್ಲಿ 2,869 ಸ್ಥಾನಗಳಿಗೆ ಗುರುವಾರ ಮತದಾನ ನಡೆಯಿತು. ಮುಂಬೈನಲ್ಲಿ 1,700 ಸೇರಿದಂತೆ 15,931 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 52.94% ಮತದಾನ ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Fri, 16 January 26

ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ