AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Boat capsized: ಗಂಗಾ ನದಿಯಲ್ಲಿ ದೋಣಿ ಮಗುಚಿ, 5 ಮಕ್ಕಳ ಮೃತದೇಹ ಪತ್ತೆ

ಬುಧವಾರ ಸಂಜೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದೆ. ರಕ್ಷಣಾ ತಂಡದಿಂದ ಐವರು ಮಕ್ಕಳ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ.

Boat capsized:  ಗಂಗಾ ನದಿಯಲ್ಲಿ ದೋಣಿ ಮಗುಚಿ, 5 ಮಕ್ಕಳ ಮೃತದೇಹ ಪತ್ತೆ
Boat capsize in river Ganga
ಅಕ್ಷಯ್​ ಪಲ್ಲಮಜಲು​​
|

Updated on:Sep 02, 2022 | 9:56 AM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿನ ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ್ದು, ಇದೀಗ ರಕ್ಷಣಾ ತಂಡಗಳು ನದಿಯಿಂದ ಐದು ಮಕ್ಕಳ ಶವಗಳನ್ನು ಹೊರತೆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, 24 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ರೆಯೋತಿಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನದಿಯಲ್ಲಿ ದೋಣಿ ಮೂಲಕ ಮಾರ್ಕೆಟ್​ನಿಂದ ವಾಪಸ್ಸು ಬರಬೇಕಾದರೆ ಈ ಘಟನೆ ನಡೆದಿದೆ.

ಸ್ಥಳೀಯರ ಸಹಾಯದಿಂದ ಹದಿನೇಳು ಜನರನ್ನು ರಕ್ಷಿಸಲಾಗಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅರುಣ್ ಸಿಂಗ್ ತಿಳಿಸಿದ್ದಾರೆ.

ತರಬೇತಿ ಪಡೆದ ದೋಣಿ ಚಾಲಕರ ಮೂಲಕ ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮುಳುಗುಗಾರರು ನಗೀನಾ ಪಾಸ್ವಾನ್ (70) ಮತ್ತು ವಿಷಂಭರ್ ಗೌರ್ ಅವರ ಮೃತದೇಹಗಳನ್ನು ಬುಧವಾರ ಹೊರತೆಗೆದಿದ್ದಾರೆ.

ಸಂಧ್ಯಾ ಕುಮಾರ್ (6), ಅನಿತಾ ಪಾಸ್ವಾನ್ (10), ಅಲಿಸಾ ಯಾದವ್ (5), ಖುಶಾಲ್ ಯಾದವ್ (10) ಮತ್ತು ಸತ್ಯಂ (12) ಮೃತದೇಹಗಳನ್ನು ಗುರುವಾರ ನದಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.

Published On - 9:56 am, Fri, 2 September 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!