AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್: 142 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ತಡೆದ ಭದ್ರತಾ ಏಜೆನ್ಸಿ

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 142 ಶಂಕಿತ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ಕರಾವಳಿ ಭದ್ರತಾ ಏಜೆನ್ಸಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶಹೀದ್ ದ್ವೀಪದ ಬಳಿ ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿ 14-15 ದಿನಗಳ ಹಿಂದೆ ಬಾಂಗ್ಲಾದೇಶದಿಂದ ಹೊರಟು ಇಂಡೋನೇಷ್ಯಾಕ್ಕೆ ತೆರಳುತ್ತಿತ್ತು ಎಂದು ಅವರು ಹೇಳಿದರು.

ಅಂಡಮಾನ್: 142 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ತಡೆದ ಭದ್ರತಾ ಏಜೆನ್ಸಿ
ದೋಣಿ
ನಯನಾ ರಾಜೀವ್
|

Updated on: Dec 25, 2023 | 7:37 AM

Share

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 142 ಶಂಕಿತ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ಕರಾವಳಿ ಭದ್ರತಾ ಏಜೆನ್ಸಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶಹೀದ್ ದ್ವೀಪದ ಬಳಿ ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿ 14-15 ದಿನಗಳ ಹಿಂದೆ ಬಾಂಗ್ಲಾದೇಶದಿಂದ ಹೊರಟು ಇಂಡೋನೇಷ್ಯಾಕ್ಕೆ ತೆರಳುತ್ತಿತ್ತು ಎಂದು ಅವರು ಹೇಳಿದರು.

ಪೋರ್ಟ್ ಬ್ಲೇರ್ ಪೊಲೀಸ್ ನಿಯಂತ್ರಣ ಕೊಠಡಿಗೆ ಸ್ಥಳೀಯ ಗುಪ್ತಚರದಿಂದ ಶಹೀದ್ ದ್ವೀಪ ಬಳಿ ಅನುಮಾನಾಸ್ಪದ ದೋಣಿ ಚಲನೆಯ ಬಗ್ಗೆ ಕರೆ ಬಂದಿತ್ತು.

ಅನೇಕ ಕರಾವಳಿ ಭದ್ರತಾ ಏಜೆನ್ಸಿಗಳು (ನೌಕಾಪಡೆ, ಕೋಸ್ಟ್ ಗಾರ್ಡ್ ಮತ್ತು ಮೆರೈನ್ ಪೋಲೀಸ್ ಸೇರಿದಂತೆ) ಸ್ಥಳಕ್ಕೆ ಆಗಮಿಸಿತ್ತು. ದೋಣಿಯಲ್ಲಿ 47 ಮಹಿಳೆಯರು ಮತ್ತು 59 ಅಪ್ರಾಪ್ತರು ಇದ್ದರು.

ದೋಣಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಮುಂದಿನ ಪ್ರಯಾಣ ಸಾಧ್ಯವಾಗದ ಕಾರಣ ಸಾಗರ ಪೊಲೀಸರು ಅವರನ್ನು ಶಹೀದ್ ದ್ವೀಪಕ್ಕೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಅವರೆಲ್ಲರನ್ನೂ ಪೋರ್ಟ್ ಬ್ಲೇರ್‌ಗೆ ಕರೆದೊಯ್ದು ಕೇಂದ್ರ ಸರ್ಕಾರದಿಂದ ಹೆಚ್ಚಿನ ಸೂಚನೆಗಾಗಿ ಸ್ಥಳೀಯ ಆಡಳಿತವು ತಾತ್ಕಾಲಿಕ ಆಶ್ರಯದಲ್ಲಿ ಇರಿಸಿದೆ ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಫೆಬ್ರವರಿ 13 ರಂದು 69 ರೋಹಿಂಗ್ಯಾಗಳೊಂದಿಗೆ ಮೋಟಾರ್ ಬೋಟ್ ನಿಕೋಬಾರ್ ಜಿಲ್ಲೆಯನ್ನು ತಲುಪಿತ್ತು. ಇದು ಇಂಡೋನೇಷ್ಯಾಕ್ಕೆ ಪ್ರಯಾಣಿಸುತ್ತಿತ್ತು, ಆದರೆ ಕೆಟ್ಟ ಹವಾಮಾನ ಅಡ್ಡಿಪಡಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ