AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್: 142 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ತಡೆದ ಭದ್ರತಾ ಏಜೆನ್ಸಿ

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 142 ಶಂಕಿತ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ಕರಾವಳಿ ಭದ್ರತಾ ಏಜೆನ್ಸಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶಹೀದ್ ದ್ವೀಪದ ಬಳಿ ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿ 14-15 ದಿನಗಳ ಹಿಂದೆ ಬಾಂಗ್ಲಾದೇಶದಿಂದ ಹೊರಟು ಇಂಡೋನೇಷ್ಯಾಕ್ಕೆ ತೆರಳುತ್ತಿತ್ತು ಎಂದು ಅವರು ಹೇಳಿದರು.

ಅಂಡಮಾನ್: 142 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ತಡೆದ ಭದ್ರತಾ ಏಜೆನ್ಸಿ
ದೋಣಿ
ನಯನಾ ರಾಜೀವ್
|

Updated on: Dec 25, 2023 | 7:37 AM

Share

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 142 ಶಂಕಿತ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿಯನ್ನು ಕರಾವಳಿ ಭದ್ರತಾ ಏಜೆನ್ಸಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶಹೀದ್ ದ್ವೀಪದ ಬಳಿ ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿ 14-15 ದಿನಗಳ ಹಿಂದೆ ಬಾಂಗ್ಲಾದೇಶದಿಂದ ಹೊರಟು ಇಂಡೋನೇಷ್ಯಾಕ್ಕೆ ತೆರಳುತ್ತಿತ್ತು ಎಂದು ಅವರು ಹೇಳಿದರು.

ಪೋರ್ಟ್ ಬ್ಲೇರ್ ಪೊಲೀಸ್ ನಿಯಂತ್ರಣ ಕೊಠಡಿಗೆ ಸ್ಥಳೀಯ ಗುಪ್ತಚರದಿಂದ ಶಹೀದ್ ದ್ವೀಪ ಬಳಿ ಅನುಮಾನಾಸ್ಪದ ದೋಣಿ ಚಲನೆಯ ಬಗ್ಗೆ ಕರೆ ಬಂದಿತ್ತು.

ಅನೇಕ ಕರಾವಳಿ ಭದ್ರತಾ ಏಜೆನ್ಸಿಗಳು (ನೌಕಾಪಡೆ, ಕೋಸ್ಟ್ ಗಾರ್ಡ್ ಮತ್ತು ಮೆರೈನ್ ಪೋಲೀಸ್ ಸೇರಿದಂತೆ) ಸ್ಥಳಕ್ಕೆ ಆಗಮಿಸಿತ್ತು. ದೋಣಿಯಲ್ಲಿ 47 ಮಹಿಳೆಯರು ಮತ್ತು 59 ಅಪ್ರಾಪ್ತರು ಇದ್ದರು.

ದೋಣಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಮುಂದಿನ ಪ್ರಯಾಣ ಸಾಧ್ಯವಾಗದ ಕಾರಣ ಸಾಗರ ಪೊಲೀಸರು ಅವರನ್ನು ಶಹೀದ್ ದ್ವೀಪಕ್ಕೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಅವರೆಲ್ಲರನ್ನೂ ಪೋರ್ಟ್ ಬ್ಲೇರ್‌ಗೆ ಕರೆದೊಯ್ದು ಕೇಂದ್ರ ಸರ್ಕಾರದಿಂದ ಹೆಚ್ಚಿನ ಸೂಚನೆಗಾಗಿ ಸ್ಥಳೀಯ ಆಡಳಿತವು ತಾತ್ಕಾಲಿಕ ಆಶ್ರಯದಲ್ಲಿ ಇರಿಸಿದೆ ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಫೆಬ್ರವರಿ 13 ರಂದು 69 ರೋಹಿಂಗ್ಯಾಗಳೊಂದಿಗೆ ಮೋಟಾರ್ ಬೋಟ್ ನಿಕೋಬಾರ್ ಜಿಲ್ಲೆಯನ್ನು ತಲುಪಿತ್ತು. ಇದು ಇಂಡೋನೇಷ್ಯಾಕ್ಕೆ ಪ್ರಯಾಣಿಸುತ್ತಿತ್ತು, ಆದರೆ ಕೆಟ್ಟ ಹವಾಮಾನ ಅಡ್ಡಿಪಡಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ