AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಬಿಹಾರದ ಗಂಗಾ ನದಿಯಲ್ಲಿ ಮುಳುಗಿದ 55 ಜನರಿದ್ದ ಬೋಟ್; 15 ಜನ ನಾಪತ್ತೆ

ಮುಳುಗಿದ ಬೋಟ್​ನಲ್ಲಿ ಸುಮಾರು 50ರಿಂದ 55 ಜನರು ಇದ್ದರು. ಗಂಗಾ ನದಿಯಲ್ಲಿ ಮುಳುಗಿ 15 ಜನರು ನಾಪತ್ತೆಯಾಗಿದ್ದಾರೆ. ಕಾರ್ಮಿಕರು ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

Big News: ಬಿಹಾರದ ಗಂಗಾ ನದಿಯಲ್ಲಿ ಮುಳುಗಿದ 55 ಜನರಿದ್ದ ಬೋಟ್; 15 ಜನ ನಾಪತ್ತೆ
ಗಂಗಾನದಿಯಲ್ಲಿ ಮುಳುಗಿದ ಬೋಟ್
TV9 Web
| Edited By: |

Updated on:Sep 05, 2022 | 10:43 AM

Share

ಪಾಟ್ನಾ: ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಂದು ಬೆಳಗ್ಗೆ ಪಾಟ್ನಾ (Patna) ಸಮೀಪದ ದಾನಾಪುರದ ಶಹಾಪುರ್ ಪೊಲೀಸ್ ಠಾಣೆ ಪ್ರದೇಶದ ಬಳಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಗಂಗಾ ನದಿಯಲ್ಲಿ (Ganga River) ಮುಳುಗಿದೆ. ಈ ಘಟನೆಯಲ್ಲಿ 15 ಜನರು ನಾಪತ್ತೆಯಾಗಿದ್ದಾರೆ. ಉಳಿದವರನ್ನು ಸುರಕ್ಷಿತವಾಗಿ ದಡಕ್ಕೆ ಸಾಗಿಸಲಾಗಿದೆ.

ಮುಳುಗಿದ ಬೋಟ್​ನಲ್ಲಿ ಸುಮಾರು 50ರಿಂದ 55 ಜನರು ಇದ್ದರು. ಗಂಗಾ ನದಿಯಲ್ಲಿ ಮುಳುಗಿ 15 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪಡೆದ ನಂತರ ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ. ಕೆಲವು ಕಾರ್ಮಿಕರು ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಕ್ಷಣೆಗಾಗಿ ಎರಡು ಬೋಟ್​​ಗಳನ್ನು ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ಎನ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಲಾಗಿದೆ ಎಂದು ಎಸ್‌ಡಿಎಂ ಡಣಾಪುರ ತಿಳಿಸಿದ್ದಾರೆ.

ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 10 ಜನರು ಪ್ರಾಣಾಪಾಯದಿಂದ ಪಾರು

ಮಾಹಿತಿಯ ಮೇರೆಗೆ ಶಹಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಕಾಣೆಯಾದವರಲ್ಲಿ ರಾಮಧರ್ ರಾಮ್ (65), ಕಾಂಚನ್ ದೇವಿ (35), ಡೋರಾ ರಾಮ್ ಅವರ ಪುತ್ರಿ (40), ಭೋಲಾ ಕುಮಾರಿ (12), ಆರತಿ ಕುಮಾರಿ (14), ಪೂಜನ್ ರೈ ಅವರ ಪತ್ನಿ (45), ಕುಂಕುಮ್ ದೇವಿ, ವಿನೋದ್ ರೈ, ಛೋಟು ರಾಮ್ ಮುಂತಾದವರು ಸೇರಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 am, Mon, 5 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್