Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಚಿಲ್ಕಾ ಸರೋವರದಲ್ಲಿ 2 ಗಂಟೆಗಳ ಕಾಲ ಹಡಗಿನಲ್ಲಿ ಸಿಲುಕಿದ್ದ ಕೇಂದ್ರ ಸಚಿವ ಪರಷೋತ್ತಮ್

ಕೇಂದ್ರ ಸಚಿವ ಪರಷೋತ್ತಮ್ ರೂಪಾಲಾ(Parshottam Rupala) ಅವರಿದ್ದ ಬೋಟ್ ಭಾನುವಾರ ಸಂಜೆ ಸುಮಾರು ಎರಡು ಗಂಟೆಗಳ ಕಾಲ ಒಡಿಶಾದ ಚಿಲ್ಕಾ ಸರೋವರದಲ್ಲಿ ಸಿಲುಕಿಕೊಂಡಿತ್ತು. ಮೀನುಗಾರರು ಹಾಕಿದ ಬಲೆಯಲ್ಲಿ ಬೋಟ್​​ಸಿಕ್ಕಿಹಾಕಿಕೊಂಡಿರಬಹುದು ಎಂಬ ಅನುಮಾನಗಳು ಇದ್ದವು.

ಒಡಿಶಾದ ಚಿಲ್ಕಾ ಸರೋವರದಲ್ಲಿ 2 ಗಂಟೆಗಳ ಕಾಲ ಹಡಗಿನಲ್ಲಿ ಸಿಲುಕಿದ್ದ ಕೇಂದ್ರ ಸಚಿವ ಪರಷೋತ್ತಮ್
ರೂಪಾಲ
Follow us
ನಯನಾ ರಾಜೀವ್
|

Updated on: Jan 08, 2024 | 8:39 AM

ಕೇಂದ್ರ ಸಚಿವ ಪರಷೋತ್ತಮ್ ರೂಪಾಲಾ(Parshottam Rupala) ಅವರಿದ್ದ ಬೋಟ್ ಭಾನುವಾರ ಸಂಜೆ ಸುಮಾರು ಎರಡು ಗಂಟೆಗಳ ಕಾಲ ಒಡಿಶಾದ ಚಿಲ್ಕಾ ಸರೋವರದಲ್ಲಿ ಸಿಲುಕಿಕೊಂಡಿತ್ತು. ಮೀನುಗಾರರು ಹಾಕಿದ ಬಲೆಯಲ್ಲಿ ಬೋಟ್​​ಸಿಕ್ಕಿಹಾಕಿಕೊಂಡಿರಬಹುದು ಎಂಬ ಅನುಮಾನಗಳು ಇದ್ದವು.

ಆಡಳಿತವು ಮತ್ತೊಂದು ಹಡಗನ್ನು ಸ್ಥಳಕ್ಕೆ ಕಳುಹಿಸಿತು, ಅದರ ಮೂಲಕ ಸಚಿವರನ್ನು ರಕ್ಷಿಸಿ ಅವರು ತೆರಳಬೇಕಿದ್ದ ಸ್ಥಾನಕ್ಕೆ ಕರೆದೊಯ್ಯಲಾಯಿತು. ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಮತ್ತು ಇತರ ಕೆಲವು ಸ್ಥಳೀಯ ಪಕ್ಷದ ನಾಯಕರು ಅವರೊಂದಿಗೆ ಇದ್ದರು. ಸಚಿವರು ಖುರ್ದಾ ಜಿಲ್ಲೆಯ ಬಾರ್ಕುಲ್‌ನಿಂದ ಪ್ರಯಾಣ ಆರಂಭಿಸಿ ಬ್ಲೂ ಲಗೂನ್ ಮೂಲಕ ಪುರಿ ಜಿಲ್ಲೆಯ ಸತ್ಪಾದಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಹಡಗು ಸುಮಾರು ಎರಡು ಗಂಟೆಗಳ ಕಾಲ ನಲ್ಬನಾ ಪಕ್ಷಿಧಾಮದ ಬಳಿಯ ಸರೋವರದ ಮಧ್ಯದಲ್ಲಿ ಸಿಲುಕಿಕೊಂಡಿತ್ತು. ಕತ್ತಲಾಗಿತ್ತು, ಹಡಗು ಚಲಾಯಿಸುವ ವ್ಯಕ್ತಿ ದಾರಿ ತಪ್ಪಿ ಬೇರೆ ಮಾರ್ಗದಲ್ಲಿ ಬಂದಿದ್ದರು. ಆಡಳಿತವು ತಕ್ಷಣವೇ ಸತ್ಪಾರಾದಿಂದ ಮತ್ತೊಂದು ಹಡಗನ್ನು ಕಳುಹಿಸಿತು ಮತ್ತು ಸಚಿವರು ಮತ್ತು ಅವರ ಸಹೋದ್ಯೋಗಿಗಳು ಅದನ್ನು ಹತ್ತಿದರು.

ಪುರಿ ಜಿಲ್ಲೆಯ ಕೃಷ್ಣಪ್ರಸಾದ್ ಪ್ರದೇಶದ ಬಳಿ ಕಾರ್ಯಕ್ರಮವೊಂದರಲ್ಲಿ ರೂಪಾಲಾ ಭಾಗವಹಿಸಬೇಕಿತ್ತು. ಆದರೆ ಈ ಘಟನೆಯಿಂದಾಗಿ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಗೊಳಿಸಲಾಯಿತು. ರಾತ್ರಿ 10.30ರ ಸುಮಾರಿಗೆ ರೂಪಾಲಾ ಪುರಿಗೆ ತಲುಪಿದ್ದಾರೆ.

ಮತ್ತಷ್ಟು ಓದಿ: Europa 2: ನವಮಂಗಳೂರು ಬಂದರಿಗೆ ಆಗಮಿಸಿದ ಕ್ರೂಸ್ ಹಡಗು

11ನೇ ಹಂತದ ಸಾಗರ್ ಪರಿಕ್ರಮ ಕಾರ್ಯಕ್ರಮದಡಿ ಮೀನುಗಾರರೊಂದಿಗೆ ಸಂವಾದ ನಡೆಸಲು ಕೇಂದ್ರ ಸಚಿವರು ಒಡಿಶಾಗೆ ಭೇಟಿ ನೀಡಿದ್ದಾರೆ.

ಇದಕ್ಕೂ ಮುನ್ನ ಗಂಜಾಂ ಜಿಲ್ಲೆಯ ಗೋಪಾಲಪುರ ಬಂದರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೋಮವಾರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಅವರೊಂದಿಗೆ ರೂಪಾಲಾ ಅವರು ಪಾರಾದೀಪ್ ಮೀನುಗಾರಿಕಾ ಬಂದರಿನ ಆಧುನೀಕರಣ ಮತ್ತು ಮೇಲ್ದರ್ಜೆಗೇರಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!