AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ

ಬೋಟ್ ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 15, 2021 | 6:18 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬೋಟ್ ಮುಳುಗಿ 9 ಮೀನುಗಾರರು ಸಾವನ್ನಪ್ಪಿದ್ದಾರೆ. ಬೋಟ್​ನಲ್ಲಿದ್ದ ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬಂಗಾಳಕೊಲ್ಲಿ (Bay of Bengal) ಸಮುದ್ರದಲ್ಲಿ ಬುಧವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿದ್ದ ಬೋಟ್ ಇದ್ದಕ್ಕಿದ್ದಂತೆ ಮುಳುಗಿದೆ.

ಈಗಾಗಲೇ 9 ಮೀನುಗಾರರ ಶವಗಳನ್ನು ದಡಕ್ಕೆ ತರಲಾಗಿದೆ. ಇನ್ನೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಕೋಸ್ಟಲ್ ಗಾರ್ಡ್​ಗಳ ಸಹಾಯದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಕಾಕ್​ದ್ವೀಪ್ ಎಸ್​ಡಿಪಿಓ ಅನಿಲ್ ಕುಮಾರ್ ರಾಯ್ ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ 12 ಜನರು ಬಕ್ಕಾಲಿ-ಫ್ರಾಜರ್​ಗಂಜ್ ಕರಾವಳಿ ಪ್ರದೇಶದಿಂದ 25ರಿಂದ 30 ಕಿ.ಮೀ ದೂರ ಚಲಿಸುತ್ತಿದ್ದಂತೆ ಬೋಟ್ ಮುಳುಗಿತ್ತು. ಬೋಟ್ ಮುಳುಗಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ. ನಾಪತ್ತೆಯಾಗಿರುವ ಇನ್ನೋರ್ವ ಕೂಡ ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಹೈಮಾಬತಿ ಎಂಬ ಹಡಗು ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಹಿಂದೆ ಬರುತ್ತಿದ್ದ ಇನ್ನೊಂದು ಬೋಟ್​ನವರು ಆ ಇಬ್ಬರನ್ನು ಎಳೆದುಕೊಂಡು ರಕ್ಷಿಸಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ. ಅವರಲ್ಲಿ 9 ಜನರು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಬ್ಬರ ಶವ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Rudraksh Varanasi: ಶಿವಲಿಂಗದ ಆಕಾರದಲ್ಲಿ ವಾರಾಣಸಿಯಲ್ಲಿ ಎದ್ದು ನಿಂತಿದೆ ರುದ್ರಾಕ್ಷ ಸೆಂಟರ್; ಈ ಭವ್ಯ ಕಟ್ಟಡದ ವಿಶೇಷತೆಯೇನು ಗೊತ್ತಾ?

ಇದನ್ನೂ ಓದಿ: ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

Published On - 6:17 pm, Thu, 15 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ