AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ

ಬೋಟ್ ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 15, 2021 | 6:18 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬೋಟ್ ಮುಳುಗಿ 9 ಮೀನುಗಾರರು ಸಾವನ್ನಪ್ಪಿದ್ದಾರೆ. ಬೋಟ್​ನಲ್ಲಿದ್ದ ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬಂಗಾಳಕೊಲ್ಲಿ (Bay of Bengal) ಸಮುದ್ರದಲ್ಲಿ ಬುಧವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿದ್ದ ಬೋಟ್ ಇದ್ದಕ್ಕಿದ್ದಂತೆ ಮುಳುಗಿದೆ.

ಈಗಾಗಲೇ 9 ಮೀನುಗಾರರ ಶವಗಳನ್ನು ದಡಕ್ಕೆ ತರಲಾಗಿದೆ. ಇನ್ನೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಕೋಸ್ಟಲ್ ಗಾರ್ಡ್​ಗಳ ಸಹಾಯದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಕಾಕ್​ದ್ವೀಪ್ ಎಸ್​ಡಿಪಿಓ ಅನಿಲ್ ಕುಮಾರ್ ರಾಯ್ ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ 12 ಜನರು ಬಕ್ಕಾಲಿ-ಫ್ರಾಜರ್​ಗಂಜ್ ಕರಾವಳಿ ಪ್ರದೇಶದಿಂದ 25ರಿಂದ 30 ಕಿ.ಮೀ ದೂರ ಚಲಿಸುತ್ತಿದ್ದಂತೆ ಬೋಟ್ ಮುಳುಗಿತ್ತು. ಬೋಟ್ ಮುಳುಗಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ. ನಾಪತ್ತೆಯಾಗಿರುವ ಇನ್ನೋರ್ವ ಕೂಡ ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಹೈಮಾಬತಿ ಎಂಬ ಹಡಗು ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಹಿಂದೆ ಬರುತ್ತಿದ್ದ ಇನ್ನೊಂದು ಬೋಟ್​ನವರು ಆ ಇಬ್ಬರನ್ನು ಎಳೆದುಕೊಂಡು ರಕ್ಷಿಸಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ. ಅವರಲ್ಲಿ 9 ಜನರು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಬ್ಬರ ಶವ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Rudraksh Varanasi: ಶಿವಲಿಂಗದ ಆಕಾರದಲ್ಲಿ ವಾರಾಣಸಿಯಲ್ಲಿ ಎದ್ದು ನಿಂತಿದೆ ರುದ್ರಾಕ್ಷ ಸೆಂಟರ್; ಈ ಭವ್ಯ ಕಟ್ಟಡದ ವಿಶೇಷತೆಯೇನು ಗೊತ್ತಾ?

ಇದನ್ನೂ ಓದಿ: ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

Published On - 6:17 pm, Thu, 15 July 21

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!